ಬೆಂಗಳೂರು: “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
“ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಇದು ಸಂಭವಿಸಿಲ್ಲ ಎಂಬ ಮಾಹಿತಿ ಬಂದಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು ನಂತರ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.
ಇದನ್ನೂ ಓದಿ :
ಕಳೆದ ಬಾರಿ ಸ್ಫೋಟದ ವೇಳೆ ಚಿರತೆ ಸತ್ತಿತ್ತು. ಈ ಹಿಂದೆ ತನಿಖೆ ಮಾಡದೇ ಪ್ರಕರಣ ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಬಗ್ಗೆ ಕೇಳಿದಾಗ, “ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.
ಪರಿಹಾರದ ವಿಚಾರವಾಗಿ ಕೇಳಿದಾಗ, “ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ಮಾಹಿತಿಗಳು ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ” ಎಂದು ತಿಳಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]