ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಂ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ಕುರಿತಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ವೈದ್ಯ ಡಾ. ಮೋಹನ್, ಅವರ ಆರೋಗ್ಯ ಚೇತರಿಕೆಗಾಗಿ ನಾವು ಕಾಯುತ್ತಿದ್ದೆವು. ಆ ಆದರೆ ಅವರ ಬ್ರೈನ್ಗೆ ಅತಿ ಹೆಚ್ಚಿನ ಹಾನಿಯಾಗಿದೆ. ನಾನು ಶಿವರಾಂ ಅವರ ಸಂಬಂಧಿ ಮತ್ತು ಡಾಕ್ಟರ್ ಆಗಿ ಇವತ್ತು ನಿಮ್ಮ ಮುಂದೆ ಬಂದು ನಿಲ್ಲಲು ನನಗೆ ತುಂಬಾ ಕಷ್ಟವಾಗುತ್ತಿದೆ. ಮಿರಾಕಲ್ ಆಗುತ್ತದೆ ಎನ್ನುವ ಭಾವನೆ ನಮಗೆ ಕಮ್ಮಿಯಾಗುತ್ತಿದೆ. ನಾವು ಏನೇ ಮಾಡಿದರೂ ಅವರಿಗೆ ಹಿಂಸೆ ಆಗುತ್ತದೆ. ಕಿಡ್ನಿ, ಲಿವರ್ ವರ್ಕ್ ಆಗುತ್ತಿದೆ. ಆದರೆ ಹೃದಯ ಸ್ಪಂದಿಸುತ್ತಿಲ್ಲ. ಅವರು ತುಂಬಾ ಸಮಯ ನಮ್ಮ ಜೊತೆಗೆ ಇರಲ್ಲ ಎಂದು ಹೇಳುತ್ತಾ ವೈದ್ಯರು ಭಾವುಕರಾಗಿದ್ದಾರೆ.
ನಮಗೆ ಜೀವನಾಡಿಯಾಗಿದ್ದರು. ಒಬ್ಬ ರೋಗಿಗಿಂತ ನನಗೆ ಅಪ್ಪನ ಸ್ಥಾನದಲ್ಲಿ ಇದ್ದರು. ಅವರನ್ನು ನಾನು ಈ ಪರಿಸ್ಥಿತಿಯನ್ನು ನಾನು ಚಿಕಿತ್ಸೆ ಕೊಡಲು ತುಂಬಾ ಕಷ್ಟವಾಗುತ್ತಿದೆ. ಚಿಕಿತ್ಸೆ ನೀಡುತ್ತಿದ್ದೇವೆ, ಆದರೆ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಾರೆ ಎನ್ನುವ ನಂಬಿಕೆ ಇಲ್ಲ. ಅವರು ರಿಕವರಿ ಆಗುವ ಚಾನ್ಸ್ ತುಂಬಾ ಕಡಿಮೆ ಇದೆ. ಎಷು ದಿನ, ಎಷ್ಟು ಗಂಟೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಅವರ ಕುಟುಂಬದವರು ನಮ್ಮ ಜೊತೆಗೆ ಇದ್ದಾರೆ. ಅವರಿಗೆ ತುಂಬಾ ಹಿಂಸೆ ಮಾಡುವುದು ಬೇಡ. ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ಪ್ರಯತ್ನವನ್ನು ಕೊನೆ ಗಳಿಗೆವರೆಗೂ ಮಾಡಿ ಎಂದು ಹೇಳುತ್ತಿದ್ದಾರೆ. ಎಂಐಆರ್ ಮಾಡಲು ಆಗುತ್ತಿಲ್ಲ ಅವರನ್ನು ಬೇರೆ ಬೆಡ್ಗೆ ಶಿಫ್ಟ್ ಮಾಡಿದರೆ ಅವರ ಬಿಪಿಗೆ ಕಷ್ಟವಾಗುತ್ತದೆ ಎನ್ನುವ ಭಯವಿದೆ, ಕಂಡಿಶನ್ ಕ್ರಿಟಿಕಲ್ ಇದೆ ಎಂದು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…