ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಂ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ಕುರಿತಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ವೈದ್ಯ ಡಾ. ಮೋಹನ್, ಅವರ ಆರೋಗ್ಯ ಚೇತರಿಕೆಗಾಗಿ ನಾವು ಕಾಯುತ್ತಿದ್ದೆವು. ಆ ಆದರೆ ಅವರ ಬ್ರೈನ್ಗೆ ಅತಿ ಹೆಚ್ಚಿನ ಹಾನಿಯಾಗಿದೆ. ನಾನು ಶಿವರಾಂ ಅವರ ಸಂಬಂಧಿ ಮತ್ತು ಡಾಕ್ಟರ್ ಆಗಿ ಇವತ್ತು ನಿಮ್ಮ ಮುಂದೆ ಬಂದು ನಿಲ್ಲಲು ನನಗೆ ತುಂಬಾ ಕಷ್ಟವಾಗುತ್ತಿದೆ. ಮಿರಾಕಲ್ ಆಗುತ್ತದೆ ಎನ್ನುವ ಭಾವನೆ ನಮಗೆ ಕಮ್ಮಿಯಾಗುತ್ತಿದೆ. ನಾವು ಏನೇ ಮಾಡಿದರೂ ಅವರಿಗೆ ಹಿಂಸೆ ಆಗುತ್ತದೆ. ಕಿಡ್ನಿ, ಲಿವರ್ ವರ್ಕ್ ಆಗುತ್ತಿದೆ. ಆದರೆ ಹೃದಯ ಸ್ಪಂದಿಸುತ್ತಿಲ್ಲ. ಅವರು ತುಂಬಾ ಸಮಯ ನಮ್ಮ ಜೊತೆಗೆ ಇರಲ್ಲ ಎಂದು ಹೇಳುತ್ತಾ ವೈದ್ಯರು ಭಾವುಕರಾಗಿದ್ದಾರೆ.
ನಮಗೆ ಜೀವನಾಡಿಯಾಗಿದ್ದರು. ಒಬ್ಬ ರೋಗಿಗಿಂತ ನನಗೆ ಅಪ್ಪನ ಸ್ಥಾನದಲ್ಲಿ ಇದ್ದರು. ಅವರನ್ನು ನಾನು ಈ ಪರಿಸ್ಥಿತಿಯನ್ನು ನಾನು ಚಿಕಿತ್ಸೆ ಕೊಡಲು ತುಂಬಾ ಕಷ್ಟವಾಗುತ್ತಿದೆ. ಚಿಕಿತ್ಸೆ ನೀಡುತ್ತಿದ್ದೇವೆ, ಆದರೆ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಾರೆ ಎನ್ನುವ ನಂಬಿಕೆ ಇಲ್ಲ. ಅವರು ರಿಕವರಿ ಆಗುವ ಚಾನ್ಸ್ ತುಂಬಾ ಕಡಿಮೆ ಇದೆ. ಎಷು ದಿನ, ಎಷ್ಟು ಗಂಟೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಅವರ ಕುಟುಂಬದವರು ನಮ್ಮ ಜೊತೆಗೆ ಇದ್ದಾರೆ. ಅವರಿಗೆ ತುಂಬಾ ಹಿಂಸೆ ಮಾಡುವುದು ಬೇಡ. ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ಪ್ರಯತ್ನವನ್ನು ಕೊನೆ ಗಳಿಗೆವರೆಗೂ ಮಾಡಿ ಎಂದು ಹೇಳುತ್ತಿದ್ದಾರೆ. ಎಂಐಆರ್ ಮಾಡಲು ಆಗುತ್ತಿಲ್ಲ ಅವರನ್ನು ಬೇರೆ ಬೆಡ್ಗೆ ಶಿಫ್ಟ್ ಮಾಡಿದರೆ ಅವರ ಬಿಪಿಗೆ ಕಷ್ಟವಾಗುತ್ತದೆ ಎನ್ನುವ ಭಯವಿದೆ, ಕಂಡಿಶನ್ ಕ್ರಿಟಿಕಲ್ ಇದೆ ಎಂದು ಹೇಳಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…