ನವದೆಹಲಿ: ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ. ನನ್ನ ಹೆಸರು ರಾಹುಲ್ ಗಾಂಧಿ ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ” ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಪೌರತ್ವ ತಿದ್ದು ಪಡಿ ಮಸೂದೆ ವಿರುದ್ದ ದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಬಚಾವೋ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಸ್ತುತ ವಿಚಾರ ಇರುವುದು ನನ್ನ ಹೇಳಿಕೆಯ ಕುರಿತು ಅಲ್ಲ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಈಶಾನ್ಯ ರಾಜ್ಯಗಳಿಗೆ ಪೌರತ್ವ ಮಸೂದೆ ಮುಖಾಂತರ ಬೆಂಕಿ ಹಚ್ಚಿದ್ದಾರೆ. ಜನರ ಗಮನವನ್ನು ಆ ವಿಷಯದಿಂದ ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ನನ್ನ ಹೇಳಿಕೆಯ ಕುರಿತು ಚರ್ಚೆ ಮಾಡುತ್ತಿದ್ದಾರೆ” ಎಂದು ದೂರಿದರು.
“ಬಿಜೆಪಿ ನಾಯಕರು ನನ್ನ ಹೇಳಿಕೆಗೆ ಕ್ಷಮೆ ಕೇಳುವಂತೆ ಹೇಳುತ್ತಿದ್ದಾರೆ. ಆದರೆ ನಾನು ಸತ್ಯವನ್ನು ಹೇಳಿದ್ದೇನೆ. ನಾನು ಕ್ಷಮೆ ಕೇಳಲು ರಾಹುಲ್ ಸಾವರ್ಕರ್ ಅಲ್ಲ. ನನ್ನ ಹೆಸರು ರಾಹುಲ್ ಗಾಂಧಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರ ರಾಜಧಾನಿ ದೆಹಲಿಯನ್ನು ರೇಪ್ ಕ್ಯಾಪಿಟಲ್ ಎಂದು ಈ ಮೊದಲು ಹೇಳಿದ್ದಾರೆ. ಅದು ಈಗಲೂ ನನ್ನ ಮೊಬೈಲ್ನಲ್ಲಿ ಇದೆ. ಅದನ್ನು ನಾನು ಟ್ವೀಟ್ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
“ನಾನು, ಭಾರತದ ವಿವಿಧ ಬಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಸುದ್ದಿಯಾಗುತ್ತಿದೆ. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿದೆ. ನಾವು ಮೇಕ್ ಇನ್ ಇಂಡಿಯಾ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮಾತಾನಾಡಿದ್ದನ್ನು ನೋಡುತ್ತೇನೆ ಅಂದುಕೊಂಡಿದ್ದೆ ಆದರೆ ದಿನ ಪತ್ರಿಕೆಗಳಲ್ಲಿ ರೇಪ್ ಇನ್ ಇಂಡಿಯಾ ಸುದ್ದಿಗಳೇ ಇವೆ ಎಂದು ಹೇಳಿದ್ದೆ” ಎಂದು ತನ್ನ ಹೇಳಿಕೆಯ ಸಮರ್ಥನೆ ಮಾಡಿಕೊಂಡರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…