ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಆಯ್ಕೆಯಾದ ಎಲ್ಲಾ ಗಂಡಸು ಎಂಪಿಗಳಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ ಹಾಕಿದ್ದಾರೆ.
ಗೋ ಬ್ಯಾಕ್ ಶೋಭಾ ಅಭಿಯಾನ ವಿಚಾರಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಕ್ಷೇತ್ರದ ಈ ಹಿಂದಿನ ಗಂಡಸು ಸಂಸದರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ ಇಲ್ಲದೇ ಇರಬಹುದು. ಆದರೆ ಎಲ್ಲರಿಗಿಂತ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಗೆ ಪಾಸ್ ಪೋರ್ಟ್ ಕಚೇರಿ ಬಂದಿದೆ, ರಾಜ್ಯದ ಏಕೈಕ ಸಖಿ ಸೆಂಟರ್ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿದೆ, ಎರಡು ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ತಂದಿದ್ದೇವೆ, ಇದಲ್ಲದೆ ಜಿಟಿಡಿಸಿ ಕಟ್ಟಡ, ಕೌಶಲ್ಯ ತರಬೇತಿ ಕೇಂದ್ರ ನಿರ್ಮಾಣವಾಗಿದೆ. ಜತೆಗೆ 550 ಕೋಟಿ ರುಪಾಯಿ ಸಿಆರ್ ಎಫ್ ಫಂಡ್ ತಂದಿದ್ದೇನೆ. ಎರಡು ಜಿಲ್ಲೆಗಳಲ್ಲಿಯೂ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ’ಗಂಡಸು ’ ಸಂಸದರಾಗಿದ್ದವರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ, ಬಾಹುಬಲ ಇಲ್ಲದೆ ಇರಬಹುದು, ಅಥವಾ ಬೆಂಬಲ ಕೊಡದವರಿಲ್ಲದಿರಬಹುದು. ಆದರೆ ಇಷ್ಟು ವರ್ಷ ಕ್ಷೇತ್ರದಲ್ಲಿ ಗಂಡಸು ಸಂಸದರೆಣಿಸಿಕೊಂಡವರು ಏನು ಮಾಡಿದ್ದೀರಿ ? ಮಹಿಳೆಯಾಗಿ ನಾನು ಇಷ್ಟೆಲ್ಲಾ ಮಾಡಿದ್ದೇನೆ . ನಿಮ್ಮ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ನಾನು ಇದೆಲ್ಲವೂ ಟಿಕೆಟ್ ನ ಆಸೆಗಾಗಿ ಮಾಡಿದ್ದಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಮಾಡಿರುವಂತದ್ದು ಎಂದು ಅಕ್ರೋಶ ವ್ಯಕ್ತಪಡಿಸಿದರು.
ನನ್ನ ವಿರುದ್ದ ಧನಿ ಎತ್ತಿದವರ ಕೊಡುಗೆಯೇನು? ನಾನು 25 ವರ್ಷದಿಂದ ಪಕ್ಷಕ್ಕೆ ಮಣ್ಣು ಹೊತ್ತಿದ್ದೇನೆ. ರಾಜ್ಯದಲ್ಲೆಲ್ಲಾ ಓಡಾಡಿದ್ದೇನೆ. ನೀವು ಬಿಜೆಪಿಗೆ ಏನು ಮಾಡಿದ್ದೀರಿ? ನನ್ನ ಜೊತೆ ಚರ್ಚೆಗೆ ಬನ್ನಿ ಆಮೇಲೆ ಟಿಕೆಟ್ ಕೇಳಿ ಎಂದು ಪರೋಕ್ಷವಾಗಿ ಜಯಪ್ರಕಾಶ್ ಹೆಗ್ಡೆ ವಿರುದ್ದ ಕಿಡಿಕಾರಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…