ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಆಯ್ಕೆಯಾದ ಎಲ್ಲಾ ಗಂಡಸು ಎಂಪಿಗಳಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ ಹಾಕಿದ್ದಾರೆ.
ಗೋ ಬ್ಯಾಕ್ ಶೋಭಾ ಅಭಿಯಾನ ವಿಚಾರಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಕ್ಷೇತ್ರದ ಈ ಹಿಂದಿನ ಗಂಡಸು ಸಂಸದರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ ಇಲ್ಲದೇ ಇರಬಹುದು. ಆದರೆ ಎಲ್ಲರಿಗಿಂತ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಗೆ ಪಾಸ್ ಪೋರ್ಟ್ ಕಚೇರಿ ಬಂದಿದೆ, ರಾಜ್ಯದ ಏಕೈಕ ಸಖಿ ಸೆಂಟರ್ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿದೆ, ಎರಡು ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ತಂದಿದ್ದೇವೆ, ಇದಲ್ಲದೆ ಜಿಟಿಡಿಸಿ ಕಟ್ಟಡ, ಕೌಶಲ್ಯ ತರಬೇತಿ ಕೇಂದ್ರ ನಿರ್ಮಾಣವಾಗಿದೆ. ಜತೆಗೆ 550 ಕೋಟಿ ರುಪಾಯಿ ಸಿಆರ್ ಎಫ್ ಫಂಡ್ ತಂದಿದ್ದೇನೆ. ಎರಡು ಜಿಲ್ಲೆಗಳಲ್ಲಿಯೂ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ’ಗಂಡಸು ’ ಸಂಸದರಾಗಿದ್ದವರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ, ಬಾಹುಬಲ ಇಲ್ಲದೆ ಇರಬಹುದು, ಅಥವಾ ಬೆಂಬಲ ಕೊಡದವರಿಲ್ಲದಿರಬಹುದು. ಆದರೆ ಇಷ್ಟು ವರ್ಷ ಕ್ಷೇತ್ರದಲ್ಲಿ ಗಂಡಸು ಸಂಸದರೆಣಿಸಿಕೊಂಡವರು ಏನು ಮಾಡಿದ್ದೀರಿ ? ಮಹಿಳೆಯಾಗಿ ನಾನು ಇಷ್ಟೆಲ್ಲಾ ಮಾಡಿದ್ದೇನೆ . ನಿಮ್ಮ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ನಾನು ಇದೆಲ್ಲವೂ ಟಿಕೆಟ್ ನ ಆಸೆಗಾಗಿ ಮಾಡಿದ್ದಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಮಾಡಿರುವಂತದ್ದು ಎಂದು ಅಕ್ರೋಶ ವ್ಯಕ್ತಪಡಿಸಿದರು.
ನನ್ನ ವಿರುದ್ದ ಧನಿ ಎತ್ತಿದವರ ಕೊಡುಗೆಯೇನು? ನಾನು 25 ವರ್ಷದಿಂದ ಪಕ್ಷಕ್ಕೆ ಮಣ್ಣು ಹೊತ್ತಿದ್ದೇನೆ. ರಾಜ್ಯದಲ್ಲೆಲ್ಲಾ ಓಡಾಡಿದ್ದೇನೆ. ನೀವು ಬಿಜೆಪಿಗೆ ಏನು ಮಾಡಿದ್ದೀರಿ? ನನ್ನ ಜೊತೆ ಚರ್ಚೆಗೆ ಬನ್ನಿ ಆಮೇಲೆ ಟಿಕೆಟ್ ಕೇಳಿ ಎಂದು ಪರೋಕ್ಷವಾಗಿ ಜಯಪ್ರಕಾಶ್ ಹೆಗ್ಡೆ ವಿರುದ್ದ ಕಿಡಿಕಾರಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…