Featured

‘ಕ್ಷೇತ್ರದಲ್ಲಿ ನಿಮ್ಮ ಕೈಲಾಗದ ಕೆಲಸ ನಾನು ಮಾಡಿದ್ದೇನೆ’ – ಪುರುಷ ಸಂಸದರಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ – Vishwanews24

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಆಯ್ಕೆಯಾದ ಎಲ್ಲಾ ಗಂಡಸು ಎಂಪಿಗಳಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ ಹಾಕಿದ್ದಾರೆ.

ಗೋ ಬ್ಯಾಕ್ ಶೋಭಾ ಅಭಿಯಾನ ವಿಚಾರಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಕ್ಷೇತ್ರದ ಈ ಹಿಂದಿನ ಗಂಡಸು ಸಂಸದರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ ಇಲ್ಲದೇ ಇರಬಹುದು. ಆದರೆ ಎಲ್ಲರಿಗಿಂತ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಗೆ ಪಾಸ್ ಪೋರ್ಟ್ ಕಚೇರಿ ಬಂದಿದೆ, ರಾಜ್ಯದ ಏಕೈಕ ಸಖಿ ಸೆಂಟರ್ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿದೆ, ಎರಡು ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ತಂದಿದ್ದೇವೆ, ಇದಲ್ಲದೆ ಜಿಟಿಡಿಸಿ ಕಟ್ಟಡ, ಕೌಶಲ್ಯ ತರಬೇತಿ ಕೇಂದ್ರ ನಿರ್ಮಾಣವಾಗಿದೆ. ಜತೆಗೆ 550 ಕೋಟಿ ರುಪಾಯಿ ಸಿಆರ್ ಎಫ್ ಫಂಡ್ ತಂದಿದ್ದೇನೆ. ಎರಡು ಜಿಲ್ಲೆಗಳಲ್ಲಿಯೂ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ’ಗಂಡಸು ’ ಸಂಸದರಾಗಿದ್ದವರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ, ಬಾಹುಬಲ ಇಲ್ಲದೆ ಇರಬಹುದು, ಅಥವಾ ಬೆಂಬಲ ಕೊಡದವರಿಲ್ಲದಿರಬಹುದು. ಆದರೆ ಇಷ್ಟು ವರ್ಷ ಕ್ಷೇತ್ರದಲ್ಲಿ ಗಂಡಸು ಸಂಸದರೆಣಿಸಿಕೊಂಡವರು ಏನು ಮಾಡಿದ್ದೀರಿ ? ಮಹಿಳೆಯಾಗಿ ನಾನು ಇಷ್ಟೆಲ್ಲಾ ಮಾಡಿದ್ದೇನೆ . ನಿಮ್ಮ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ನಾನು ಇದೆಲ್ಲವೂ ಟಿಕೆಟ್ ನ ಆಸೆಗಾಗಿ ಮಾಡಿದ್ದಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಮಾಡಿರುವಂತದ್ದು ಎಂದು ಅಕ್ರೋಶ ವ್ಯಕ್ತಪಡಿಸಿದರು.

ನನ್ನ ವಿರುದ್ದ ಧನಿ ಎತ್ತಿದವರ ಕೊಡುಗೆಯೇನು? ನಾನು 25 ವರ್ಷದಿಂದ ಪಕ್ಷಕ್ಕೆ ಮಣ್ಣು ಹೊತ್ತಿದ್ದೇನೆ. ರಾಜ್ಯದಲ್ಲೆಲ್ಲಾ ಓಡಾಡಿದ್ದೇನೆ. ನೀವು ಬಿಜೆಪಿಗೆ ಏನು ಮಾಡಿದ್ದೀರಿ? ನನ್ನ ಜೊತೆ ಚರ್ಚೆಗೆ ಬನ್ನಿ ಆಮೇಲೆ ಟಿಕೆಟ್ ಕೇಳಿ ಎಂದು ಪರೋಕ್ಷವಾಗಿ ಜಯಪ್ರಕಾಶ್ ಹೆಗ್ಡೆ ವಿರುದ್ದ ಕಿಡಿಕಾರಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago