ಉಡುಪಿ

ಕ್ಷೇತ್ರದ ಅಭಿವೃದ್ಧಿ ಕುರಿತು ಮುಕ್ತ ಚರ್ಚೆಗೆ ಸಿದ್ಧ: ಹಾಲಾಡಿ’

ಕುಂದಾಪುರ ಕ್ಷೇತ್ರದ ಅಭಿವೃದ್ಧಿಗಾಗಿ 496 ಕೋ.ರೂ. ಅನುದಾನ ವಿನಿಯೋಗಿಸಲಾಗಿದೆ. ಆದರೂ ಕೆಲವರು ಅಭಿವೃದ್ಧಿಯಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.  ಈ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಎಂದು  ಕುಂದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಹೇಳಿದರು.

 ಶಿರಿಯಾರ ಕಲ್ಮರ್ಗಿ ರೇಖಾ ಕೆದ್ಲಾಯ ಅವರ ಮನೆಯ ವಠಾರದಲ್ಲಿ ಜರಗಿದ ಶಿರಿಯಾರ ಗ್ರಾ.ಪಂ. ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಜಿ.ಪಂ ಸದಸ್ಯ ಪ್ರತಾಪ ಹೆಗ್ಡೆ ಮಾರಾಳಿ ಮಾತನಾಡಿ, ಹಾಲಾಡಿ ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆಯಾಗಲಿದ್ದು, ಈ ಬಾರಿ 50 ಸಾವಿರಕ್ಕೂ ಅಧಿಕ  ಮತದ ಅಂತರದಿಂದ ಜಯಗಳಿಸಲಿದ್ದಾರೆ ಎಂದರು.
ನ್ಯಾಯವಾದಿ ಶಿರಿಯಾರ ಪ್ರಭಾಕರ ನಾಯಕ್‌, ಶಕ್ತಿ ಕೇಂದ್ರದ ಅಧ್ಯಕ್ಷ ವಂಡಾರು ಪ್ರವೀಣ ಶೆಟ್ಟಿ,  ಕ್ಷೇತ್ರ ಕಾರ್ಯದರ್ಶಿ ಶಂಕರ ಅಂಕದಕಟ್ಟೆ, ಪಕ್ಷದ ಮುಖಂಡರಾದ  ಸುರೇಶ್‌ ಶೆಟ್ಟಿ ಕೊಳ್ಕೆಬೆ„ಲು, ರವೀಂದ್ರನಾಥ ಶೆಟ್ಟಿ ಕೊಳ್ಕೆಬೆ„ಲು, ಅಶೋಕ್‌ ಪ್ರಭು ಸಾ„ಬ್ರಕಟ್ಟೆ, ಶ್ರೀಧರ ಶೆಟ್ಟಿ, ತಾ.ಪಂ. ಸದಸ್ಯೆ ನಿರ್ಮಲಾ ಶೆಟ್ಟಿ, ಮಾಜಿ ಸದಸ್ಯ ದಿವಾಕರ ಶೆಟ್ಟಿ, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸಂತೋಷ ಪೂಜಾರಿ, ಶಿರಿಯಾರ ಗ್ರಾ.ಪಂ. ಅಧ್ಯಕ್ಷೆ ವಿಶಾಲ, ಉಪಾಧ್ಯಕ್ಷ ಹರೀಶ ಕಾಂಚನ್‌ ಕೊಡ್ಲಬೈಲು, ಸದಸ್ಯರಾದ ಪ್ರದೀಪ್‌ ಬಲ್ಲಾಳ್‌,  ಸುಧೀಂದ್ರ ಶೆಟ್ಟಿ, ರೇಖಾ ಕೆದ್ಲಾಯ, ವೇದಾವತಿ, ಜಲಜಾ, ಅಮಿತಾ, ಬೇಬಿ ಎಸ್‌., ಹಿರಿಯರಾದ ಮಹಾಲಿಂಗ ಪೂಜಾರಿ, ಸೋಮ ಪೂಜಾರಿ ಸಕ್ಕಟ್ಟು, ಶೇಖರ ಕುಲಾಲ ಕೊಡ್ಲಬೈಲು ಉಪಸ್ಥಿತರಿದ್ದರು.  ಶೇಖರ ಸುವರ್ಣ ನಿರೂಪಿಸಿದರು.

ಕ್ಷೇತ್ರದ ಜನತೆಗೆ ಅಭಿವೃದ್ಧಿ ಕಾರ್ಯಗಳ ಕುರಿತು ತಿಳಿದಿದೆ. ನಮಗೆ ಕಾರ್ಯಕರ್ತರೇ ಕೂಡ ಜನರು ನಮ್ಮ ಮೇಲೆ ವಿಶ್ವಾಸವಿರಿಸಲಿದ್ದಾರೆ.
– ಹಾಲಾಡಿ  ಶ್ರೀನಿವಾಸ ಶೆಟ್ಟಿ

 

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago