ಕಾಪು ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದಾಗ ಕೇಂದ್ರದ ಹಿರಿಯ ಸಚಿವರನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೊಳಿಸಿ ಮೂಡುಬೆಳ್ಳೆ ಹಾಗೂ ಶಿರ್ವದ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಅದನ್ನು ಈಗ ಕಾಂಗ್ರೆಸ್ ಪಕ್ಷದವರು ತಮ್ಮ ಸರಕಾರದ ಸಾಧನೆಯೆಂಬಂತೆ ಬಿಂಬಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುವುದು ಶಾಸಕರ ಸಾಧನೆಯಲ್ಲ, ಕರ್ತವ್ಯವಾಗಿದೆ. ಮತದಾರರು ಬಿಜೆಪಿಯನ್ನು ಬೆಂಬಲಿಸಿ ಜನಸೇವೆ ಮಾಡುವ ಅವಕಾಶ ನೀಡಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್. ಮೆಂಡನ್ ಹೇಳಿದರು.
ಶಿರ್ವ ಬಸ್ ನಿಲ್ದಾಣದ ಬಳಿ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಬಿಜೆಪಿ ಚುನಾವಣಾ ಪ್ರಚಾರ ರಥ ಯಾತ್ರೆಯ ಪ್ರಥಮ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ ಮಾತನಾಡಿ ಕೇಂದ್ರದ ಮೋದಿ ಸರಕಾರದ ಜನಪರ ಯೋಜನೆಗಳನ್ನು ತನ್ನ ಸಾಧನೆಯೆಂಬಂತೆ ಬಿಂಬಿಸುವ ರಾಜ್ಯ ಸರಕಾರ ಹಿಂದೂ ಯುವಕರ ರಕ್ಷಣೆ ಮಾಡಲು ವಿಫಲವಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತದ ಬದಲಾವಣೆಗಾಗಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸಿ ಸಜ್ಜನ ರಾಜಕಾರಣಿ ಲಾಲಾಜಿ ಮೆಂಡನ್ ಅವರನ್ನು ಗೆಲ್ಲಿಸಬೇಕಾಗಿದೆ ಎಂದು ಹೇಳಿದರು.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ವಾರಿಜಾ ಪೂಜಾರ್ತಿ ಮಾತನಾಡಿದರು. ರಥಯಾತ್ರೆಯ ಉಸ್ತುವಾರಿ ನಾಗರಾಜ ಶೆಟ್ಟಿ, ಪ್ರಸಾದ್ ಶೆಟ್ಟಿ ಕುತ್ಯಾರು,ದೇವದಾಸ್ ನಾಯಕ್, ಶಿರ್ವಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ನಾಯ್ಕ,ಸಂತೋಷ್ ಕುಮಾರ್ ಮೂಡುಬೆಳ್ಳೆ, ರಾಜೇಶ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.ರವೀಂದ್ರ ಪಾಟ್ಕರ್ ನಿರೂಪಿಸಿ ,ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಕೋಡು ವಂದಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…