ಬೆಳ್ತಂಗಡಿ: ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ. ಅದರ ಕುರಿತು ಗಮನ ಕೊಡುವುದಿಲ್ಲ. ತನ್ನದೇನಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾತ್ರ ಎಂದು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೃಂಗೇರಿ ಶಾಸಕ ರಾಜೇಗೌಡ ಸ್ಪಷ್ಪಪಡಿಸಿದರು.
ಬಿಜೆಪಿಗೆ ಬರುವಂತೆ ನಿರಂತರ ಒತ್ತಡಗಳು, ಕರೆಗಳು ಬರುತ್ತಿದೆ. ಬಿಜೆಪಿಯ ಹಿರಿಯ ನಾಯಕರುಗಳು ಕರೆ ಮಾಡಿ ಹಣ, ಅಧಿಕಾರದ ಎಲ್ಲ ರೀತಿಯ ಆಮಿಷಗಳನ್ನೂ ಹಾಕುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅದು ಹೆಚ್ಚಾಗಿದೆ. ಆದರೆ ತಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಪ್ರಕಟಿಸಿದರು.
ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಇಳಿಯಲೂ ಸಿದ್ದರಾಗುತ್ತಿದ್ದಾರೆ. ಇದು ಪ್ರಜಾಪ್ತಭುತ್ವವನ್ನು ಅಣಕಿಸುವ ಕಾರ್ಯವಾಗಿದೆ.
ಒಮ್ಮೆ ಚುನಾವಣೆಯಲ್ಲಿ ಗೆದ್ದವರು ಅವಧಿ ಮುಗಿಯುವವರೆಗೂ ಆ ಪಕ್ಷದಲ್ಲಿಯೇ ಉಳಿದುಕೊಳ್ಳಬೇಕು. ಅವಧಿ ಮುಗಿದು ಮುಂದಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದಿದ್ದರೆ ಮಾಡಲಿ ಎಂದರು.
ಬೆಳ್ತಂಗಡಿ ಶಾಸಕರು ಬಂದು ಭೇಟಿಯಾಗಿದ್ದರು ಅವರು ರಾಜಕೀಯ ನಿಲುವುಗಳ ಕುರಿತು ಮಾತ್ರ ಮಾತನಾಡಿದ್ದರು. ಬೇರೆ ಯಾವುದೇ ಆಮಿಷ, ಒತ್ತಡ ಹೇರಿಲ್ಲ. ನಾರ್ಮಲ್ ಭೇಟಿ ಮಾಡಿದ್ದರು ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…