Featured

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಮಿಥುನ್‌ ರೈ – Vishwanews24

ಕಡಬ: ಕಾಂಗ್ರೆಸ್‌ನ ಅಭಿವೃದ್ಧಿಪರ ಹಾಗೂ ಜಾತ್ಯತೀತ ನೆಲೆಗಟ್ಟಿನ ಸಂಸ್ಕಾರ ನಮಗೆ ಬಲುದೊಡ್ಡ ಶಕ್ತಿಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಿಥುನ್‌ ರೈ ನುಡಿದರು.

ಅವರು ಕಡಬ ಪೇಟೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನು ಅಪ್ಪಟ ಹಿಂದೂ ಸಂಸ್ಕೃತಿಯಲ್ಲಿ ಬೆಳೆದವನು. ಆದರೆ ಅದು ಬಿಜೆಪಿಯವರ ಕೋಮುವಾದಿ ಹಿಂದುತ್ವವಲ್ಲ. ಜಿಲ್ಲೆಯ ಶಾಂತಿಯನ್ನು ಕಾಪಾಡುವುದರೊಂದಿಗೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ. ಬಿಜೆಪಿಯವರು ಹಿಂದುತ್ವವನ್ನು ಮುಂದಿಟ್ಟು ಕೊಂಡು ಜನರ ಮಧ್ಯೆ ಬಿರುಕು ಹುಟ್ಟಿಸಿ ಜಾತಿ ರಾಜಕೀಯ ಮಾಡಿ ಓಟನ್ನು ವಿಭಜಿಸಿ ಗೆಲ್ಲುವ ತಂತ್ರ ಹೆಣೆದಿದ್ದಾರೆ. ಆದರೆ ಅದು ಈ ಬಾರಿ ಫಲ ನೀಡುವುದಿಲ್ಲ ಎಂದರು.

ಕೇಸರಿ ಶಾಲು ಬಿಜೆಪಿಯವರ ಸೊತ್ತಲ್ಲ. ನಾವು ಕೇಸರಿ ಧರಿಸಿದರೆ ಮುಸ್ಲಿಮರಿಗೆ, ಕ್ರೈಸ್ತರಿಗೆ ಹಾಗೂ ಹಿಂದೂ ಸಮುದಾಯಕ್ಕೆ ಸಮಸ್ಯೆ ಇಲ್ಲ. ಆದರೆ ನಮ್ಮ ಹೆಗಲ ಮೇಲೆ ಕೇಸರಿ ಕಂಡರೆ ಬಿಜೆಪಿ ಅಭ್ಯರ್ಥಿ ನಳಿನ್‌ಕುಮಾರ್‌ ಕಟೀಲು ಅವರಿಗೇಕೆ ಉರಿ ಎಂದು ಮಿಥುನ್‌ ರೈ ಪ್ರಶ್ನಿಸಿದರು. ನಾನು ಗೆದ್ದರೆ ಕೋಡಿಂಬಾಳ ರೈಲ್ವೇ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಲಾಗುವುದು. ಕಡಬ ತಾಲೂಕಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ತೀವ್ರವಾಗಿ ಕಾಡುತ್ತಿರುವ ವಿದ್ಯುತ್‌ ಸಮಸ್ಯೆಯನ್ನು ನೀಗಿಸುವುದರೊಂದಿಗೆ ಯುವ ಸಮುದಾಯಕ್ಕೆ ಹೆಚ್ಚಿನ ಉದ್ಯೋಗಾವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಎಂಎಲ್‌ಸಿ ಹರೀಶ್‌ ಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಪರಿಷತ್‌ ಸದಸ್ಯ ಎಲ್‌.ಎಸ್‌. ಭೋಜೇ ಗೌಡ, ಕಣ್ಣೂರು ಮಾಜಿ ಸಂಸದ ಅಬ್ದುಲ್ಲಾ ಕುಟ್ಟಿ ಮಾತನಾಡಿ ಮಿಥುನ್‌ ರೈ ಪರ ಮತ ಯಾಚಿಸಿದರು. ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಮಾಧವ ಗೌಡ ಜಾಕೆ, ಕೆಪಿಸಿಸಿ ಸದಸ್ಯ ಡಾ| ರಘು, ತಾ.ಪಂ. ಸದಸ್ಯ ಫಝಲ್‌ ಕೋಡಿಂಬಾಳ, ಜಿ.ಪಂ. ಮಾಜಿ ಸದಸ್ಯ ಭರತ್‌ ಮುಂಡೋಡಿ, ಕೆ.ಎಸ್‌. ಸಾಹುಲ್‌ ಹಮೀದ್‌ ತಂಙಳ್‌ ಮರ್ದಾಳ, ಡಿಸಿಸಿ ಕಾರ್ಯದರ್ಶಿ ಎಚ್‌.ಕೆ. ಇಲ್ಯಾಸ್‌, ಕಡಬ ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಅಂಚನ್‌, ತಾ.ಪಂ. ಸದಸ್ಯೆ ಆಶಾ ಲಕ್ಷ್ಮಣ್‌ ಗುಂಡ್ಯ, ಜೆಡಿಎಸ್‌ ಯುವ ಮುಂದಾಳು ಅಕ್ಷಿತ್‌ ಸುವರ್ಣ, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸುಧೀರ್‌ ದೇವಾಡಿಗ, ಕಾಂಗ್ರೆಸ್‌ ಪ್ರಮುಖರಾದ ರೋಯಿ ಅಬ್ರಹಾಂ, ವಿಜಯಕುಮಾರ್‌ ಸೊರಕೆ, ಸತೀಶ್‌ ಕೆಡೆಂಜಿ, ವಿಜಯಕುಮಾರ್‌ ರೈ ಕರ್ಮಾಯಿ, ಸೈಮನ್‌ ಸಿ.ಜೆ. ಉಪಸ್ಥಿತರಿದ್ದರು. ಕಾಂಗ್ರೆಸ್‌ ಅಲ್ಪಸಂಖ್ಯಾಕ ವಿಭಾಗದ ರಾಜ್ಯ ಸಂಯೋಜಕ ಎ.ಸಿ. ಜಯರಾಜ್‌ ಸ್ವಾಗತಿಸಿ, ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ಪ್ರಸ್ತಾವನೆಗೈದರು. ಕಡಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಣೇಶ್‌ ಗೌಡ ಕೈಕುರೆ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago