ಜಿಲ್ಲೆ

‘ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು’…………ಡಾ.ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು,: ‘ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?’ ಎಂದು ಆರ್‌ಎಸ್‌ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ಕುದ್ರೋಳಿ ದೇವಸ್ಥಾನಕ್ಕೆ ಪ್ರಭಾಕರ ಭಟ್ ಕಾಲಿಟ್ಟಿದ್ದೇ ಅಪಚಾರ: ಮಟ್ಟು ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. ‘ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು’ ಎಂದು ಹೇಳಿದ್ದರು.

ಡಾ. ಪ್ರಭಾಕರ ಭಟ್ ಅವರು, ‘ಗೋಭಕ್ಷಣೆ ಮಾಡುವ ಖಾದರ್‌ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್‌ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು’ ಎಂದು ಹೇಳಿಕೆ ನೀಡಿದ್ದರು.

‘ನಾನು ಹಿಂದು’ವೆಂದರೆ ಕೋಮುವಾದವೇ? ಕಲ್ಲಡ್ಕ ಪ್ರಭಾಕರ್ ಭಟ್ ಸಂದರ್ಶನ ‘ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ’ ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago