ಮಂಗಳೂರು,: ‘ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?’ ಎಂದು ಆರ್ಎಸ್ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ಕುದ್ರೋಳಿ ದೇವಸ್ಥಾನಕ್ಕೆ ಪ್ರಭಾಕರ ಭಟ್ ಕಾಲಿಟ್ಟಿದ್ದೇ ಅಪಚಾರ: ಮಟ್ಟು ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. ‘ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು’ ಎಂದು ಹೇಳಿದ್ದರು.
ಡಾ. ಪ್ರಭಾಕರ ಭಟ್ ಅವರು, ‘ಗೋಭಕ್ಷಣೆ ಮಾಡುವ ಖಾದರ್ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು’ ಎಂದು ಹೇಳಿಕೆ ನೀಡಿದ್ದರು.
‘ನಾನು ಹಿಂದು’ವೆಂದರೆ ಕೋಮುವಾದವೇ? ಕಲ್ಲಡ್ಕ ಪ್ರಭಾಕರ್ ಭಟ್ ಸಂದರ್ಶನ ‘ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ’ ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…