ಮಂಗಳೂರು,: ‘ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?’ ಎಂದು ಆರ್ಎಸ್ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ಕುದ್ರೋಳಿ ದೇವಸ್ಥಾನಕ್ಕೆ ಪ್ರಭಾಕರ ಭಟ್ ಕಾಲಿಟ್ಟಿದ್ದೇ ಅಪಚಾರ: ಮಟ್ಟು ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. ‘ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು’ ಎಂದು ಹೇಳಿದ್ದರು.
ಡಾ. ಪ್ರಭಾಕರ ಭಟ್ ಅವರು, ‘ಗೋಭಕ್ಷಣೆ ಮಾಡುವ ಖಾದರ್ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು’ ಎಂದು ಹೇಳಿಕೆ ನೀಡಿದ್ದರು.
‘ನಾನು ಹಿಂದು’ವೆಂದರೆ ಕೋಮುವಾದವೇ? ಕಲ್ಲಡ್ಕ ಪ್ರಭಾಕರ್ ಭಟ್ ಸಂದರ್ಶನ ‘ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ’ ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…