ಹುಬ್ಬಳ್ಳಿ: ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಉಪವಾಸ ಸತ್ಯಾಗ್ರಹ ಮಾಡಿಯಾದರೂ, ಖಾದಿ ನೇಕಾರರ ಉಳಿವಿಗೆ ಶ್ರಮಿಸುತ್ತೇನೆ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಸಂಸ್ಫಾಪಕ ವಿನಯ್ ಗುರೂಜಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ನೋಡಿ ಹೆಮ್ಮೆ ಪಡುತ್ತೇವೆ. ಆದರೆ, ಅದನ್ನು ಸಿದ್ಧಪಡಿಸುವವರ ಸಂಕಷ್ಟ ನೋಡುತ್ತಿಲ್ಲ. ಟ್ರಸ್ಟ್ ವತಿಯಿಂದ ಅವರಿಗೆ ಎರಡು ತಿಂಗಳ ದಿನಸಿ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯಬೇಕಾದ ನೆರವನ್ನೂ ಕೊಡಿಸುತ್ತೇವೆ ಎಂದರು.
‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24
ರೈತರ ಶೋಷಣೆಯಾದರೆ ಹೋರಾಟ ಮಾಡಲು ಸಿದ್ಧ. ಕೃಷಿ ಕಾಯ್ದೆಗಳ ಬಗೆಗೂ ಪ್ರಧಾನಮಂತ್ರಿ ಅವರಿಗೆ ಪತ್ರ ಬರೆಯಲಾಗಿದೆ. 15 ದಿನಗಳಲ್ಲಿ ಉತ್ತರ ಬಾರದಿದ್ದರೆ, ಅವಶ್ಯಕತೆ ಬಿದ್ದಲ್ಲಿ ದೆಹಲಿಯ ಹೋರಾಟದಲ್ಲಿ ಬಾಗಿಯಗುತ್ತೇನೆ ಎಂದರು. ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ಪ್ರಶ್ನೆಗೆ, ಉತ್ತರಿಸಲಿಲ್ಲ.
ರೈತರೊಂದಿಗೆ ಬೆರೆತಾಗ ಮಾತ್ರ ಅವರ ಸಮಸ್ಯೆಗಳ ಅರಿವಾಗುತ್ತದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರೂ ಅವರೊಂದಿಗೆ ಬೆರೆಯಬೇಕು. ಒಂದೆರಡು ದಿನಗಳ ಕಾಲ ಅವರೊಂದಿಗಿರಬೇಕು. ರಾಮನ ಮಂದಿರ ನಿರ್ಮಣಕ್ಕೆ ಕ್ಕೆ ನೆರವು ನೀಡುವುದಂತೆ ರೈತರ ಸಂಕಷ್ಟಕ್ಕೂ ಜನರು ಸ್ಪಂದಿಸಬೇಕು ಎಂದರು.
ದುಃಖಿಗಳ ಬಗೆಗೆ ಭಾಷಣ ಮಾಡದೇ ಅವರಲ್ಲಿ ದುಃಖದಲ್ಲಿ ಭಾಗಿಯಾದಂತಹ ಮಹಾನ್ ಸಂತ ಮಹಾತ್ಮ ಗಾಂಧೀಜಿ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ. ಗಾಂಧೀಜಿ ಅವರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದರು.
ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…