ಹುಬ್ಬಳ್ಳಿ: ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಉಪವಾಸ ಸತ್ಯಾಗ್ರಹ ಮಾಡಿಯಾದರೂ, ಖಾದಿ ನೇಕಾರರ ಉಳಿವಿಗೆ ಶ್ರಮಿಸುತ್ತೇನೆ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಸಂಸ್ಫಾಪಕ ವಿನಯ್ ಗುರೂಜಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ನೋಡಿ ಹೆಮ್ಮೆ ಪಡುತ್ತೇವೆ. ಆದರೆ, ಅದನ್ನು ಸಿದ್ಧಪಡಿಸುವವರ ಸಂಕಷ್ಟ ನೋಡುತ್ತಿಲ್ಲ. ಟ್ರಸ್ಟ್ ವತಿಯಿಂದ ಅವರಿಗೆ ಎರಡು ತಿಂಗಳ ದಿನಸಿ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯಬೇಕಾದ ನೆರವನ್ನೂ ಕೊಡಿಸುತ್ತೇವೆ ಎಂದರು.
‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24
ರೈತರ ಶೋಷಣೆಯಾದರೆ ಹೋರಾಟ ಮಾಡಲು ಸಿದ್ಧ. ಕೃಷಿ ಕಾಯ್ದೆಗಳ ಬಗೆಗೂ ಪ್ರಧಾನಮಂತ್ರಿ ಅವರಿಗೆ ಪತ್ರ ಬರೆಯಲಾಗಿದೆ. 15 ದಿನಗಳಲ್ಲಿ ಉತ್ತರ ಬಾರದಿದ್ದರೆ, ಅವಶ್ಯಕತೆ ಬಿದ್ದಲ್ಲಿ ದೆಹಲಿಯ ಹೋರಾಟದಲ್ಲಿ ಬಾಗಿಯಗುತ್ತೇನೆ ಎಂದರು. ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ಪ್ರಶ್ನೆಗೆ, ಉತ್ತರಿಸಲಿಲ್ಲ.
ರೈತರೊಂದಿಗೆ ಬೆರೆತಾಗ ಮಾತ್ರ ಅವರ ಸಮಸ್ಯೆಗಳ ಅರಿವಾಗುತ್ತದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರೂ ಅವರೊಂದಿಗೆ ಬೆರೆಯಬೇಕು. ಒಂದೆರಡು ದಿನಗಳ ಕಾಲ ಅವರೊಂದಿಗಿರಬೇಕು. ರಾಮನ ಮಂದಿರ ನಿರ್ಮಣಕ್ಕೆ ಕ್ಕೆ ನೆರವು ನೀಡುವುದಂತೆ ರೈತರ ಸಂಕಷ್ಟಕ್ಕೂ ಜನರು ಸ್ಪಂದಿಸಬೇಕು ಎಂದರು.
ದುಃಖಿಗಳ ಬಗೆಗೆ ಭಾಷಣ ಮಾಡದೇ ಅವರಲ್ಲಿ ದುಃಖದಲ್ಲಿ ಭಾಗಿಯಾದಂತಹ ಮಹಾನ್ ಸಂತ ಮಹಾತ್ಮ ಗಾಂಧೀಜಿ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ. ಗಾಂಧೀಜಿ ಅವರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದರು.
ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…