ಹುಬ್ಬಳ್ಳಿ: ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಉಪವಾಸ ಸತ್ಯಾಗ್ರಹ ಮಾಡಿಯಾದರೂ, ಖಾದಿ ನೇಕಾರರ ಉಳಿವಿಗೆ ಶ್ರಮಿಸುತ್ತೇನೆ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಸಂಸ್ಫಾಪಕ ವಿನಯ್ ಗುರೂಜಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ನೋಡಿ ಹೆಮ್ಮೆ ಪಡುತ್ತೇವೆ. ಆದರೆ, ಅದನ್ನು ಸಿದ್ಧಪಡಿಸುವವರ ಸಂಕಷ್ಟ ನೋಡುತ್ತಿಲ್ಲ. ಟ್ರಸ್ಟ್ ವತಿಯಿಂದ ಅವರಿಗೆ ಎರಡು ತಿಂಗಳ ದಿನಸಿ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯಬೇಕಾದ ನೆರವನ್ನೂ ಕೊಡಿಸುತ್ತೇವೆ ಎಂದರು.
‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24
ರೈತರ ಶೋಷಣೆಯಾದರೆ ಹೋರಾಟ ಮಾಡಲು ಸಿದ್ಧ. ಕೃಷಿ ಕಾಯ್ದೆಗಳ ಬಗೆಗೂ ಪ್ರಧಾನಮಂತ್ರಿ ಅವರಿಗೆ ಪತ್ರ ಬರೆಯಲಾಗಿದೆ. 15 ದಿನಗಳಲ್ಲಿ ಉತ್ತರ ಬಾರದಿದ್ದರೆ, ಅವಶ್ಯಕತೆ ಬಿದ್ದಲ್ಲಿ ದೆಹಲಿಯ ಹೋರಾಟದಲ್ಲಿ ಬಾಗಿಯಗುತ್ತೇನೆ ಎಂದರು. ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ಪ್ರಶ್ನೆಗೆ, ಉತ್ತರಿಸಲಿಲ್ಲ.
ರೈತರೊಂದಿಗೆ ಬೆರೆತಾಗ ಮಾತ್ರ ಅವರ ಸಮಸ್ಯೆಗಳ ಅರಿವಾಗುತ್ತದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರೂ ಅವರೊಂದಿಗೆ ಬೆರೆಯಬೇಕು. ಒಂದೆರಡು ದಿನಗಳ ಕಾಲ ಅವರೊಂದಿಗಿರಬೇಕು. ರಾಮನ ಮಂದಿರ ನಿರ್ಮಣಕ್ಕೆ ಕ್ಕೆ ನೆರವು ನೀಡುವುದಂತೆ ರೈತರ ಸಂಕಷ್ಟಕ್ಕೂ ಜನರು ಸ್ಪಂದಿಸಬೇಕು ಎಂದರು.
ದುಃಖಿಗಳ ಬಗೆಗೆ ಭಾಷಣ ಮಾಡದೇ ಅವರಲ್ಲಿ ದುಃಖದಲ್ಲಿ ಭಾಗಿಯಾದಂತಹ ಮಹಾನ್ ಸಂತ ಮಹಾತ್ಮ ಗಾಂಧೀಜಿ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ. ಗಾಂಧೀಜಿ ಅವರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದರು.
ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…