ಬೇಸಿಗೆ ಆರಂಭವಾಗಿದೆ, ಈ ಸಮಯದಲ್ಲಿ ನಿಮ್ಮ ದೇಹವನ್ನುತಂಪಾಗಿಡುವಲ್ಲಿ ಎಳನೀರು ಉತ್ತಮ ಆಯ್ಕೆಯಾಗಿದೆ. ಎಳನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದರೆ ನೀವು ಎಳನೀರು ಕುಡಿಯುವ ಸರಿಯಾದ ಸಮಯದ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಎನ್ನುವ ಸಂಶಯ ಸಾಕಷ್ಟು ಜನರಲ್ಲಿದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದರಿಂದ ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ.
ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದು ತುಂಬಾನೇ ಉತ್ತಮ. ಎಳನೀರಿನಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ನೈಸರ್ಗಿಕ ಎಲೆಕ್ಟ್ರೋಲೈಟ್ಗಳಿರುವುದರಿಂದ ಇದು ದೇಹವನ್ನು ತ್ವರಿತವಾಗಿ ರೀಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಎದುರಾಗುವ ಆಯಾಸ ಮತ್ತು ಬಾಯಿ ಒಣಗುವಿಕೆಯನ್ನು ಇದು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.
ಎಳನೀರು ಹೊಟ್ಟೆಗೆ ಅತ್ಯಂತ ಹಗುರವಾಗಿರುತ್ತದೆ. ಬೆಳಿಗ್ಗೆ ಇದನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಯಾವುದೇ ಒತ್ತಡವಿಲ್ಲದೆ ಚುರುಕಾಗುತ್ತದೆ. ಉತ್ತಮ ಹೈಡ್ರೇಶನ್ ನಿಂದಾಗಿ ಕರುಳಿನ ಚಲನೆ ಸುಗಮವಾಗುತ್ತದೆ.
ಇದನ್ನೂ ಓದಿ:
ದೇಹದ ಪ್ರತಿಯೊಂದು ಜೀವಕೋಶಕ್ಕೂ ಆಮ್ಲಜನಕ ಮತ್ತು ಪೋಷಕಾಂಶಗಳು ಸರಾಗವಾಗಿ ತಲುಪಲು ಎಳನೀರು ಸಹಾಯ ಮಾಡುತ್ತದೆ. ಇದು ದಿಢೀರ್ ಶಕ್ತಿ ನೀಡಿ ನಂತರ ಸುಸ್ತು ಮಾಡುವ ಬದಲು, ದಿನವಿಡೀ ಸ್ಥಿರವಾದ ಶಕ್ತಿ ಒದಗಿಸುತ್ತದೆ.
ಎಳನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ದೇಹದಲ್ಲಿ ಸೋಡಿಯಂ ಮಟ್ಟವನ್ನು ಸಮತೋಲನಗೊಳಿಸಲು ನೆರವಾಗುತ್ತದೆ. ಹಣ್ಣು ಮತ್ತು ತರಕಾರಿಗಳನ್ನು ಕಡಿಮೆ ಸೇವಿಸುವ ಜನರಿಗೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಇದು ಹೆಚ್ಚು ಸಹಾಯ ಮಾಡುತ್ತದೆ.
ದೇಹದಲ್ಲಿ ನೀರಿನಂಶ ಸರಿಯಾಗಿದ್ದರೆ ಅದು ಹೊರಗಿನಿಂದಲೂ ಗೋಚರಿಸುತ್ತದೆ. ಎಳನೀರನ್ನು ಕೆಲ ವಾರಗಳ ನಿರಂತರ ಬಳಕೆಯ ನಂತರ, ತ್ವಚೆ ಕಾಂತಿಯುತವಾಗುವುದು ಮತ್ತು ತುಟಿಗಳು ಒಣಗದಿರುವುದನ್ನು ಗಮನಿಸಬಹುದು.
ಎಳನೀರು ನೇರವಾಗಿ ಕೊಬ್ಬನ್ನು ಕರಗಿಸುವುದಿಲ್ಲ. ಆದರೆ, ಬೆಳಿಗ್ಗೆ ಅನಗತ್ಯವಾಗಿ ತಿಂಡಿ ತಿನ್ನುವುದನ್ನು ಮತ್ತು ಸಕ್ಕರೆಯುಕ್ತ ಪಾನೀಯ ಕುಡಿಯುವುದನ್ನು ಕಡಿಮೆ ಮಾಡುತ್ತದೆ. ಹೈಡ್ರೇಶನ್ ಸರಿಯಾದಾಗ ಇದು ಪರೋಕ್ಷವಾಗಿ ಉತ್ತಮ ಆಹಾರ ಕ್ರಮವನ್ನು ರೂಢಿಸಿಕೊಳ್ಳಲು ಹಾಗೂ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.
ಇದನ್ನೂ ಓದಿ:
ಎಷ್ಟು ಕುಡಿಯಬೇಕು? ಯಾವಾಗ ಕುಡಿಯಬೇಕು?
ತಜ್ಞರ ಪ್ರಕಾರ.. ದಿನಕ್ಕೆ ಒಂದು ಗ್ಲಾಸ್ ಎಳನೀರು ಕುಡಿದರೆ ಸಾಕು. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಅತ್ಯಂತ ಉತ್ತಮ. ಯಾವುದನ್ನೂ ಅತಿಯಾಗಿ ಸೇವಿಸಬಾರದು. ಎಳನೀರನ್ನು ಮಿತಿಮೀರಿ ಕುಡಿದರೆ ದೇಹದಲ್ಲಿ ಪೊಟ್ಯಾಸಿಯಮ್ ಮಟ್ಟ ಹೆಚ್ಚಾಗುವ ಅಪಾಯವಿರುತ್ತದೆ.
ಕೇವಲ ಎಳನೀರು ಕುಡಿದರೆ ಮಾತ್ರ ಸಾಲದು; ಇದರ ಜೊತೆಗೆ ಸರಿಯಾದ ಸಮಯಕ್ಕೆ ನಿದ್ದೆ ಮಾಡುವುದು, ದಿನನಿತ್ಯ ವ್ಯಾಯಾಮ ಮಾಡುವುದು ಮತ್ತು ಜಂಕ್ ಫುಡ್ಗಳಿಂದ ದೂರವಿರುವುದರಿಂದ ಈ ನೈಸರ್ಗಿಕ ಪಾನೀಯದ ಸಂಪೂರ್ಣ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.
ಇದನ್ನೂ ಓದಿ:
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…