Featured

ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿ ಮತ್ತು ನಿಮ್ಮ ಆರೋಗ್ಯದಲ್ಲಾಗುವ ಬದಲಾವಣೆಯನ್ನ ನೀವೇ ನೋಡಿ.. Vishwanews24

ಆಯುರ್ವೇದದ ಪ್ರಕಾರ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ದೇಹದ ಎಲ್ಲ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು. ಜೀವಕೋಶವನ್ನು ಪುನಃ ಶ್ಚೇತನಗೊಳಿಸುವುದು. ತುಪ್ಪವು ತ್ವಚೆಯ ಶುಷ್ಕತೆಯನ್ನು ಹೋಗಲಾಡಿಸುವುದು. ಹೀಗಾಗಿ ಸೋರಿಯಾಸಿಸ್‌ನಂತಹ ಚರ್ಮ ರೋಗಗಳನ್ನು ತಡೆಯುವುದು.

ತುಪ್ಪವು ನೈಸರ್ಗಿಕವಾದ ಲೂಬ್ರಿಕೆಂಟ್‌ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಸಂಧಿ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಕಾಯಿಲೆಗೆ ತುಪ್ಪವನ್ನು ಹೆಚ್ಚಿಕೊಳ್ಳಬಹುದು. ಜತೆಗೆ ಆಸ್ಟಿಯೊಪೊರೋಸಿಸ್‌ ಸೇರಿದಂತೆ ಅನೇಕ ಮೂಳೆ ಸಮಸ್ಯೆಗಳನ್ನು ನಿವಾರಿಸಬಹುದು.ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮಿದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆಯಾಗುವುದು. ಜತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಶಕ್ತಿಯನ್ನು ಸುಧಾರಿಸುವುದು. ಅಲ್ಲದೆ ಬುದ್ಧಿಮಾಂದ್ಯತೆ, ಮರೆವಿನ ಕಾಯಿಲೆ ಬಾರದಂತೆ ತಡೆಯುವುದು.ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ತುಪ್ಪ ಸೇವಿಸಿದರೆ ಚಯಾಪಚಯ ಕ್ರಿಯೆ ಸುಧಾರಣೆಯಾಗುತ್ತದೆ. ಅಲ್ಲದೆ ದೇಹದ ತೂಕ ಇಳಿಕೆಗೆ ಕೂಡ ನೆರವಾಗುವುದು.

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಕೂದಲಿನ ಫೋಲಿಸೆಲ್ಸ್‌ ಗಳು ಆರೋಗ್ಯವಾಗಿರುವಂತೆ ಮಾಡುವುದು. ಕೆಲವರಿಗೆ ಹಾಲು ಅಥವಾ ಹಾಲಿನಿಂದ ತಯಾರಿಸಿರುವ ಉತ್ಪನ್ನಗಳನ್ನು ಸೇವಿಸದಾಗ ಜೀರ್ಣಕ್ರಿಯೆ ಸೂಕ್ತವಾಗಿ ಆಗುವುದಿಲ್ಲ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ಲ್ಯಾಕ್ಟೋಸ್‌ ಸಮಸ್ಯೆಯು ಸುಧಾರಣೆ ಕಾಣುತ್ತದೆ. ಜೀರ್ಣ ಕ್ರಿಯೆಯೂ ಉತ್ತಮವಾಗುವುದು.

ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಬಗೆಯ ಕ್ಯಾನ್ಸರ್‌ನಿಂದ ದೂರ ಇರಬಹುದು. ಆಯುರ್ವೇದದ ಪ್ರಕಾರ ತುಪ್ಪ ಕ್ಯಾನ್ಸರ್‌ ವಿರೋಧಿ ಲಕ್ಷ ಣವನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ.ತುಪ್ಪ ಸೇವಿಸುವುದರಿಂದ ದೇಹದ ರಕ್ತನಾಳಗಳ ಒಳಗೆ ಸಂಗ್ರಹಗೊಂಡಿದ್ದ ಕೆಟ್ಟಕೊಲೆಸ್ಟ್ರಾಲ್‌ ನಿವಾರಣೆಯಾಗುವುದು. ಇದು ಹೃದಯದ ಮೇಲಿನ ಹೊರೆಯನ್ನು ತಗ್ಗಿಸಿ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆಗೊಳಿಸುವುದು

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago