Featured

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ನಿರಾಕರಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ: vishwanews24

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ನಿರಾಕರಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಜನವರಿ 7 (ಕವಾ): ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳು
ಜಿಲ್ಲಾಡಳಿತದ ಮೂಲಕ ಕಳುಹಿಸುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆಗೆ ಬೆಡ್ ಗಳನ್ನು ನೀಡಲು ನಿರಾಕರಿಸಿದಲ್ಲಿ ಅಂತಹ
ಅಸ್ಪತ್ರೆಗಳು ವಿರುದ್ದ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ.
ತಿಳಿಸಿದರು.


ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ
ಮಾತನಾಡಿದರು.

ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆಗಳು ಸರ್ಕಾರದ ನಿರ್ದೇಶನದಂತೆ ತಮ್ಮಲ್ಲಿನ ಎಲ್ಲಾ ಮಾದರಿಯ ಬೆಡ್ ಗಳಲ್ಲಿ ನಿಗಧಿತ
ಸಂಖ್ಯೆ ಬೆಡ್‌ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡಬೇಕು , ಜಿಲ್ಲಾಡಳಿತ ಕಳುಹಿಸುವ ರೋಗಿಗಳನ್ನು
ಆಸ್ಪತ್ರೆಗೆ ಸೇರಿಸಿಕೊಳ್ಳಲು ನಿರಾಕರಿಸದ್ದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ದ ಕೆಪಿಎಂಇ ಮತ್ತು ವಿಪತ್ತು ನಿರ್ವಹಣಾ
ಕಾಯಿದೆಯನ್ವಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿಗೆ ಬರುವ ಐ.ಎಲ್.ಐ ಮತ್ತು ಸಾರಿ ರೋಗಿಗಳ ವಿವರಗಳನ್ನು ತಪ್ಪದೇ ಜಿಲ್ಲಾಡಳಿತಕ್ಕೆ
ವರದಿ ಮಾಡಬೇಕು , ಇದಕ್ಕಾಗಿ ರೂಪಿಸಿರುವ ಪೋರ್ಟಲ್ ನಲ್ಲಿ ಪ್ರತಿ ದಿನದ ಮಾಹಿತಿಯನ್ನು ದಾಖಲಿಸಬೇಕು, ಮಾಹಿತಿ
ದಾಖಲಿಸದ ಆಸ್ಪತ್ರೆಗಳ ವಿರುದ್ದ ಸಹ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಗಳಲ್ಲಿನ ಎಲ್ಲಾ
ವೈದ್ಯಕೀಯ ಉಪಕರಣಗಳು ಸುಸಜ್ಜಿತವಾಗಿ ಕಾರ್ಯ ನಿರ್ವಹಿಸುತ್ತಿರುವ ಕುರಿತಂತೆ ಪರಿಶೀಲಿಸಿ, ಅಗತ್ಯ ದುರಸ್ತಿ
ಕಾರ್ಯಗಳನ್ನು ತಕ್ಷಣದಲ್ಲೇ ಕೈಗೊಂಡು ಬಳಕೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು , ಆಸ್ಪತ್ರೆಗಳಲ್ಲಿ ಯಾವುದೇ
ಸಮಸ್ಯೆಗಳಿದ್ದಲ್ಲಿ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಬಗೆಹರಿಸಕೊಳ್ಳಬೇಕು ಎಂದರು.


ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ಚಿಕಿತ್ಸೆಗೆ ತUಲುವ ವೆಚ್ಚದ ಕುರಿತ ದರಪಟ್ಟಿಯನ್ನು
ಸ್ಪಷ್ಟವಾಗಿ ಕಾಣುವಂತೆ ಅಳವಡಿಸಬೇಕು, ರೋಗಿಯನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಅಸ್ಪತ್ರೆಗೆ ವರ್ಗಾಯಿಸುವಾಗ
ಅನಗತ್ಯ ವಿಳಂಬ ಮಾಡದೇ , ರೋಗಿಯ ಚಿಕಿತ್ಸೆಗೆ ಸಂಬAದಿಸಿದ ಎಲ್ಲಾ ದಾಖಲೆಗಳನ್ನು ಸಕಾಲದಲ್ಲಿ
ನೀಡಬೇಕು,ರೋಗಿಯನ್ನು ಆಸ್ಪತ್ರೆಗೆ ಸೆರ್ಪಡೆ ಮಾಡಿಕೊಳ್ಳುವ ಮುನ್ನ ಎ.ಬಿ.ಆರ್.ಕೆ ಯೋಜನೆಯ ಬಗ್ಗೆ ಅಗತ್ಯ
ಮಾಹಿತಿಯನ್ನು ನೀಡಬೇಕು ಎಂದರು.


ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆಗೆ ನೇಮಕ ಮಾಡಿರುವ ನೋಡಲ್ ಆಧಿಕಾರಿಗಳು ,ಆಸ್ಪತ್ರೆಯಲ್ಲಿನ
ಸೌಲಭ್ಯಗಳು ಮತ್ತು ಲಭ್ಯವಿರುವ ಬೆಡ್ ಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,
ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಕೆಪಿಎಂಇ ನೋಡೆಲ್ ಆಧಿಕಾರಿ ಡಾ.ರಾಮರಾವ್, ಜಿಲ್ಲಾ ಕೋವಿಡ್ ನೋಡಲ್
ಅಧಿಕಾರಿ ಡಾ.ಪ್ರಶಾಂತ್ ಭಟ್ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳು ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago