Featured

ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

  • ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ : ಕೋವಿಡ್ ಸೋಂಕನ್ನು ಮುಂಬರುವ ದಿನಗಳಲ್ಲಿ ಎದುರಿಸಲು ಸರ್ಕಾರಿ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಸಭಾಂಗಣದಲ್ಲಿ , ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ನ ಕಳೆದ 2 ಅಲೆಗಳಲ್ಲಿ ಸರ್ಕಾರದ ಜೊತೆಗೆ ಖಾಸಗಿ ಆಸ್ಪತ್ರೆಗಳು ಅತ್ಯುತ್ತಮ ರೀತಿಯಲ್ಲಿ ಸ್ಪಂದಿಸಿ , ಸೋಂಕಿತರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಿ, ಎಲ್ಲಾ ರೀತಿಯ ಸಹಕಾರ ನೀಡಿವೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಸಹಕಾರವನ್ನು ನೀಡುವುದರಿಂದ ಮುಂದಿನ ದಿನಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದರು.

ಆಯುಷ್ಮಾನ ಆರೋಗ್ಯ ಭಾರತ್ ಯೋಜನೆಯಡಿಯಲ್ಲಿ 5000 ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಯನ್ನು ಖಾಸಗಿ ಆಸ್ಪತ್ರೆಗಳು ನೀಡಿರುವುದು ಪ್ರಶಂಸನೀಯ ಕಾರ್ಯ ಎಂದ ಅವರು, ಸರ್ಕಾರದಿಂದ ಚಿಕಿತ್ಸೆಯ ವೆಚ್ವವನ್ನು ಆದ್ಯತೆ ಮೇಲೆ ಭರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳು ಸಂಭಾವ್ಯ ಕೋವಿಡ್ ಸೋಂಕನ್ನು ಎದುರಿಸಲು ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು, 2 ನೇ ಅಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ಅಗತ್ಯವಿದ್ದ ಪ್ರಾಣವಾಯು ವಿನ ಸಮಸ್ಯೆ ರಾಜ್ಯದಲ್ಲಿ ಉಂಟಾಗಿದ್ದ ಹಿನ್ನಲೆ, ಆಕ್ಸಿಜನ್ ಸಂಗ್ರಹ ಮಾಡುವ ಜಂಬೋ ಸಿಲೆಂಡರ್, ಡ್ಯುರೋ ಸಿಲೆಂಡರ್ ಗಳನ್ನು ಅವಶ್ಯಕತೆಗೆ ತಕ್ಕಂತೆ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಶೇ. 95 ರಷ್ಟು ಜನ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆ ಶೇ.5ರಷ್ಟು ಜನರು ಇತರೆ ಸಾಮಾನ್ಯ ಕಾಯಿಲೆ, ಗರ್ಭಿಣಿಯರು, ಸೇರಿದಂತೆ ಮತ್ತಿತರರು ಲಸಿಕೆ ಪಡೆಯದೇ ಇರುವುದು ಕಂಡು ಬಂದಿರುತ್ತದೆ ಅವರಿಗೆ ಲಸಿಕೆ ಪಡೆಯಲು ವೈದ್ಯರುಗಳು ಶಿಫಾರಸು ಮಾಡಬೇಕೆಂದು ಸೂಚನೆ ನೀಡಿದರು.

ಕೋವಿಡ್ ಸೋಂಕಿನ ಚಿಕಿತ್ಸೆ, ಆಕ್ಸಿಜಿನ್ ಬಳಕೆ, ಸೇರಿದಂತೆ , ಅಗತ್ಯವಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಗಾರಗಳನ್ನು ಕೆಎಂಸಿ ಸಹಕಾರದೊಂದಿಗೆ ಆಯೋಜಿಸಬೇಕೆಂದು ಸೂಚಿಸಿದರು.

ಜಿಲ್ಲೆಯ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಅಡಿಯಲ್ಲಿ ನೊಂದಣಿ ಆಗುವಾಗ ನಮೂದಿಸಿರುವ ಬೆಡ್‌ಗಳ ಸಂಖ್ಯೆ ಸೇರಿದಂತೆ ಮತ್ತಿತರೆ ಮಾರ್ಪಾಡು ಮಾಡಿರುವ ಅಗತ್ಯ ಮಾಹಿತಿಗಳನ್ನು ಪ್ರಾಧಿಕಾರಕ್ಕೆ ನೀಡಬೇಕು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಎಲ್ಲ ಖಾಸಗಿ ಅಸ್ಪತ್ರೆಗಳ ವೈದ್ಯರು ತಮ್ಮಲ್ಲಿಗೆ ಬರುವ ಜ್ವರ ಶೀತ ಕೆಮ್ಮು ಪ್ರಕರಣಗಳ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಸೂಚನೆ ನೀಡಬೇಕು, ಎಲ್ಲಾ ವೈದ್ಯಕೀಯ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಪರಿಶೀಲಿಸಿಕೊಳ್ಳಬೇಕು, ಅಗ್ನಿ ಸುರಕ್ಷಾ ಉಪಕರಣಗಳು ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್,ಡಾ.ಶ್ರೀರಾಮರಾವ್ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತೆಗಳ ವೈದ್ಯರು ಹಾಗೂ ಖಾಸಗಿ ಅಸ್ಪತ್ರೆಗಳಿಗೆ ನಿಯೋಜಿಸಿದ್ದ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ಶೀರ್ಷಿಕೆ : ಕಾರ್ಕಳ ತಾಲೂಕು ಕುಕ್ಕುಂದೂರು ನಲ್ಲಿ ಇಂದು 101 ವರ್ಷದ ವೃದ್ದೆಯೊಬ್ಬರೂ ತಮ್ಮ ಮನೆಗೆ ಭೇಟಿ ನೀಡಿದ ಆರೋಗ್ಯ ಕಾರ್ಯಕರ್ತರಿಂದ ಸ್ವಯಂ ಪ್ರೇರಿತರಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

7 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago