ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.
ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಮಾಲೀಕ ಶರತ್ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ .ಆರ್. ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು 2ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.
ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್ಗಳು ಸಂಚರಿಸುತ್ತಿವೆ. 75 ಸಾವಿರ ಕಾರ್ಮಿಕರು ಖಾಸಗಿ ಬಸ್ಗಳ ಮೇಲೆ ಅವಲಂಬಿತರಾಗಿದ್ದಾರೆ. ಅಲ್ಲದೇ ಖಾಸಗಿ ಬಸ್ ಆಪರೇಟರ್ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ 1,620 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ಅನ್ವಯ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ 2023ರ ಜು.26ರಂದು ನೀಡಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…