ಶಿವಮೊಗ್ಗ : ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಾಜಲಕ್ಷಿ ಹೆಸರಿನ ಖಾಸಗಿ ಬಸ್ ಶಿರಾಳಕೊಪ್ಪದಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತ, ಕಾರು ಶಿವಮೊಗ್ಗ ಕಡೆಯಿಂದ ಆನವಟ್ಟಿ ಕಡೆಗೆ ಹೊರಟಿತ್ತು.
ಶಿಕಾರಿಪುರ ತಾಲೂಕಿನ ಜಾವಗಟ್ಟಿ ಬಳಿಯ ದೇವಿಕೊಪ್ಪ ಕೆರೆ ಏರಿ ಮೇಲೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ. ಕಾರು ಚಾಲಕ ಜಖಂ ಆದ ಕಾರಿನಲ್ಲಿ ಸಿಲುಕಿಕೊಂಡಿದ್ದು, ರಕ್ಷಿಸಲು ಸಾಧ್ಯವಾಗಿಲ್ಲ.
ಬಸ್ನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶಿವಮೊಗ್ಗ ಕಡೆಯಿಂದ ಕಾರು ಹಾಗೂ ಶಿರಾಳಕೊಪ್ಪ ಕಡೆಯಿಂದ ಬರುತ್ತಿದ್ದ ಬಸ್ ಶಿಕಾರಿಪುರ ತಾಲೂಕಿನ ಜಾವಗಟ್ಟಿ ಬಳಿಯ ದೇವಿಕೊಪ್ಪ ಕೆರೆ ಏರಿ ಅಪಘಾತಕ್ಕೀಡಾಗಿವೆ. ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…