ಬೆಂಗಳೂರು: ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…