ಖ್ಯಾತ ಉದ್ಯಮಿ ಟೊಯೊಟಾ ಕಿರ್ಲ್ಕೋಸ್ಕರ್ ಉಪಾಧ್ಯಕ್ಷ ವಿಕ್ರಂ ಕಿರ್ಲ್ಕೋಸ್ಕರ್ ಹೃದಯಾಘಾತ ನಿಧನ – Vishwanews24
ಖ್ಯಾತ ಉದ್ಯಮಿ ಟೊಯೊಟಾ ಕಿರ್ಲ್ಕೋಸ್ಕರ್ ಉಪಾಧ್ಯಕ್ಷ ವಿಕ್ರಂ ಕಿರ್ಲ್ಕೋಸ್ಕರ್ ಹೃದಯಾಘಾತ ನಿಧನ
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಹೃದಯಾಘಾತದಿಂದ ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ.
ವಿಕ್ರಮ್ ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಯಕ್ಷಗಾನ ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ – Vishwanews24
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಎಂದು ಪ್ರಕಟಣೆ ಹೇಳಿದೆ. ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಉದ್ಯಮ ವಲಯದ ಗಣ್ಯರು, ಸಮಾಜದ ಹಲವು ಕ್ಷೇತ್ರಗಳ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.
ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24
