ಭಾರತೀಯ ಸಿನಿಮಾ ರಂಗದ ಖ್ಯಾತ ಕಲಾನಿರ್ದೇಶಕ ಸುನಿಲ್ ಬಾಬು ಹೃದಯಾಘಾತದಿಂದ ನಿಧನರಾಗಿದ್ದಾರೆ ಮಲಯಾಳಂ, ತೆಲುಗು, ಹಿಂದಿ, ತಮಿಳು ಸೇರಿದಂತೆ ನಾನಾ ಭಾಷೆಯ ಸಿನಿಮಾಗಳಿಗೆ ಕೆಲಸ ಮಾಡಿದ್ದ ಹೆಗ್ಗಳಿಕೆ ಇವರದ್ದು. 50ರ ವಯಸ್ಸಿನ ಸುನಿಲ್ ಬಾಬು ಕೇರಳದ ಎರ್ನಾಕುಳಂನಲ್ಲಿ ವಾಸಿಸುತ್ತಿದ್ದರು. ಮನೆಯಲ್ಲೇ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಈಗಷ್ಟೇ ಅವರು ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ವಾರಿಸು ಸಿನಿಮಾದ ಶೂಟಿಂಗ್ ಮುಗಿಸಿದ್ದರು. ಮೂರ್ನಾಲ್ಕು ಸಿನಿಮಾಗಳಿಗೆ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಗಜನಿ, ಉರುಮಿ ಸೇರಿದಂತೆ ನೂರಾರು ಚಿತ್ರಗಳಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ವಿಭಿನ್ನವಾಗಿ, ಬೃಹತ್ ಸೆಟ್ ಹಾಕುವುದರಲ್ಲಿ ಪರಿಣಿತಿ ಪಡೆದಿದ್ದ ಸುನಿಲ್ ಬಾಬು ಅವರಿಗೆ 2005ರಲ್ಲಿ ಅನಂತ ಭದ್ರ ಸಿನಿಮಾಗಾಗಿ ಅತ್ಯುತ್ತಮ ಕಲಾ ನಿರ್ದೇಶಕ ರಾಜ್ಯ ಪ್ರಶಸ್ತಿ ಕೂಡ ದೊರೆತಿದೆ.
ಸುನಿಲ್ ಅವರ ಸಾವಿನ ಸುದ್ದಿಗೆ ಚಿತ್ರರಂಗ ಕಂಬಿನಿ ಮಿಡಿದಿದ್ದು, ದುಲ್ಕರ್ ಸಲ್ಮಾನ್ ಭಾವುಕರಾಗಿಯೇ ಇವರ ಬಗ್ಗೆ ಸುದೀರ್ವಾಗಿ ನೆನಪುಗಳನ್ನು ಬರೆದಿಕೊಂಡಿದ್ದಾರೆ. ನಿಮ್ಮ ಪ್ರತಿಭೆಗೆ ನೀವು ಸಾಟಿ, ನಿಮ್ಮ ಕುಟುಂಬಕ್ಕೆ ಈ ನೋವು ಭರಿಸುವಂತಹ ಶಕ್ತಿ ಸಿಗಲಿ ಎಂದು ಅವರು ಬರೆದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…