ಭಾರತೀಯ ಸಿನಿಮಾ ರಂಗದ ಖ್ಯಾತ ಕಲಾನಿರ್ದೇಶಕ ಸುನಿಲ್ ಬಾಬು ಹೃದಯಾಘಾತದಿಂದ ನಿಧನರಾಗಿದ್ದಾರೆ ಮಲಯಾಳಂ, ತೆಲುಗು, ಹಿಂದಿ, ತಮಿಳು ಸೇರಿದಂತೆ ನಾನಾ ಭಾಷೆಯ ಸಿನಿಮಾಗಳಿಗೆ ಕೆಲಸ ಮಾಡಿದ್ದ ಹೆಗ್ಗಳಿಕೆ ಇವರದ್ದು. 50ರ ವಯಸ್ಸಿನ ಸುನಿಲ್ ಬಾಬು ಕೇರಳದ ಎರ್ನಾಕುಳಂನಲ್ಲಿ ವಾಸಿಸುತ್ತಿದ್ದರು. ಮನೆಯಲ್ಲೇ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಈಗಷ್ಟೇ ಅವರು ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ವಾರಿಸು ಸಿನಿಮಾದ ಶೂಟಿಂಗ್ ಮುಗಿಸಿದ್ದರು. ಮೂರ್ನಾಲ್ಕು ಸಿನಿಮಾಗಳಿಗೆ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಗಜನಿ, ಉರುಮಿ ಸೇರಿದಂತೆ ನೂರಾರು ಚಿತ್ರಗಳಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ವಿಭಿನ್ನವಾಗಿ, ಬೃಹತ್ ಸೆಟ್ ಹಾಕುವುದರಲ್ಲಿ ಪರಿಣಿತಿ ಪಡೆದಿದ್ದ ಸುನಿಲ್ ಬಾಬು ಅವರಿಗೆ 2005ರಲ್ಲಿ ಅನಂತ ಭದ್ರ ಸಿನಿಮಾಗಾಗಿ ಅತ್ಯುತ್ತಮ ಕಲಾ ನಿರ್ದೇಶಕ ರಾಜ್ಯ ಪ್ರಶಸ್ತಿ ಕೂಡ ದೊರೆತಿದೆ.
ಸುನಿಲ್ ಅವರ ಸಾವಿನ ಸುದ್ದಿಗೆ ಚಿತ್ರರಂಗ ಕಂಬಿನಿ ಮಿಡಿದಿದ್ದು, ದುಲ್ಕರ್ ಸಲ್ಮಾನ್ ಭಾವುಕರಾಗಿಯೇ ಇವರ ಬಗ್ಗೆ ಸುದೀರ್ವಾಗಿ ನೆನಪುಗಳನ್ನು ಬರೆದಿಕೊಂಡಿದ್ದಾರೆ. ನಿಮ್ಮ ಪ್ರತಿಭೆಗೆ ನೀವು ಸಾಟಿ, ನಿಮ್ಮ ಕುಟುಂಬಕ್ಕೆ ಈ ನೋವು ಭರಿಸುವಂತಹ ಶಕ್ತಿ ಸಿಗಲಿ ಎಂದು ಅವರು ಬರೆದಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…