ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.
ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.
ಅಷ್ಟೇ ಅಲ್ಲ ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ಅವರು ನಟಿಸುತ್ತಿದ್ದರು.ನಂ
ನಂದಿನಿ ಅವರ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.
ನಂದಿನಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ ನಿಧನ ಬಳಿಕ ಆ ಕೆಲಸ ತಾನು ಮಾಡುವಂತೆ ಮನೆಯವರು ಒತ್ತಾಯಿಸಿದ್ದರು. ಆದ್ರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲವಂತೆ.
ನೊಂದಿದ್ದ ನಂದಿನಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…