ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.
ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.
ಅಷ್ಟೇ ಅಲ್ಲ ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ಅವರು ನಟಿಸುತ್ತಿದ್ದರು.ನಂ
ನಂದಿನಿ ಅವರ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.
ನಂದಿನಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ ನಿಧನ ಬಳಿಕ ಆ ಕೆಲಸ ತಾನು ಮಾಡುವಂತೆ ಮನೆಯವರು ಒತ್ತಾಯಿಸಿದ್ದರು. ಆದ್ರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲವಂತೆ.
ನೊಂದಿದ್ದ ನಂದಿನಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…