Featured

ಖ್ಯಾತ ಗಾಯಕ ರಘು ದೀಕ್ಷಿತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಹೊಸದಿಲ್ಲಿ:ನಟಿ ತನುಶ್ರೀ ದತ್ತಾ ಅವರು ನಾನಾ ವಿರುದ್ಧ ಆರೋಪ ಮಾಡಿದ ಬಳಿಕ ಮೀಟೂ ಅಭಿಯಾನ ಶುರುವಾಗಿದ್ದು, ಇದೀಗ ಸ್ಯಾಂಡಲ್‍ವುಡ್‍ಗೂ ಕಾಲಿಟ್ಟಿದೆ.

ಇದೀಗ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಕೇಳಿಬಂದಿದೆ. ತಮಿಳಿನ ಖ್ಯಾತ ಗೀತ ಸಾಹಿತಿ ವೈರಮುತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಗಾಯಕಿ ಚಿನ್ಮಯಿ ಶ್ರೀಪಾದ ಅವರು ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಮಾಡಿದ್ದಾರೆ. ಚಿನ್ಮಯ್ ತನ್ನ ಸ್ನೇಹಿತೆಯರಿಗೆ ಆದ ಅನುಭವಗಳನ್ನು ಎರಡು ಪತ್ರಗಳ ಮೂಲಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ರಘು ದೀಕ್ಷಿತ್ ಪರಭಕ್ಷಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೆಲವು ವರ್ಷಗಳ ಹಿಂದೆ ರೆಕಾರ್ಡಿಂಗ್‌ಗಾಗಿ ಅವರ ಸ್ಟುಡಿಯೋಗೆ ಆಹ್ವಾನಿಸಲಾಗಿತ್ತು. ಅವರ ಪತ್ನಿಗೆ ಹುಷಾರಿಲ್ಲ ಎಂದಿದ್ದರು. ಅವರ ಪತ್ನಿ ಒಳ್ಳೆಯರು. ಅವರು ಬಂದ ಕಾರಣ ರೆಕಾರ್ಡಿಂಗ್ ಕೆಲಸ ನಡೆಯಲಿಲ್ಲ. ಕೆಲಸಕ್ಕಾಗಿ ಬಂದಿದ್ದೇನೆ ಎಂದು ಪತ್ನಿ ಬಳಿ ನಟಿಸುವಂತೆ ತಿಳಿಸಿದರು. ಈ ಬಗ್ಗೆ ಅವರ ಜತೆ ವಾಗ್ವಾದ ನಡೆಯಿತು. ಬಳಿಕ ಅವರ ಪತ್ನಿ ಬಂದು ಚೆನ್ನಾಗಿಯೇ ಮಾತನಾಡಿಕೊಂಡು ಹೊರಟು ಹೋದರು. ರೆಕಾರ್ಡಿಂಗ್ ಮುಗಿದ ಬಳಿಕ ಚೆಕ್‌ಗೆ ಸಹಿ ಹಾಕುವ ಸಂದರ್ಭದಲ್ಲಿ ನನ್ನನ್ನು ಹತ್ತಿರಕ್ಕೆ ಬರಸೆಳೆದು ಚುಂಬಿಸುವಂತೆ ಕೇಳಿದರು. ಬಳಿಕ ಬಾಗಿಲ ಬಳಿ ನನ್ನನ್ನು ಎತ್ತಿಕೊಳ್ಳಲು ಪ್ರಯತ್ನಿಸಿದರು, ನಾನಾಗ ಕೂಗುತ್ತಾ ಕೆಳಗೆ ಓಡಿ ಹೋದೆ. ಬಹಳಷ್ಟು ಹೆಣ್ಣುಮಕ್ಕಳು ಅವರ ಕೈಯಲ್ಲಿ ಇದೇ ರೀತಿ ಅನುಭವಿಸಿರುತ್ತಾರೆ ಎಂದು ನನಗೆ ಗೊತ್ತು. ಹೇಸಿಗೆ ಆಗುತ್ತದೆ. ನನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸಲ್ಲ. ನಿಜವಾಗಿ ನನಗೆ ಆ ಗಟ್ಸ್ ಇಲ್ಲ, ನಾನಿನ್ನೂ ಸಂಗೀತದಲ್ಲಿ ನೆಲೆನಿಲ್ಲುತ್ತಿದ್ದೇನೆ” ಎಂದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ”ಚಿನ್ಮಯಿ ಹೇಳಿರುವ ವ್ಯಕ್ತಿಗೆ ನಾನು ಈ ಹಿಂದೆಯೇ ಅವರು ಬಯಸಿದಂತೆ ಸಾರ್ವಜನಿಕವಾಗಿ ಅಲ್ಲದೆ, ಖಾಸಗಿಯಾಗಿ ಕ್ಷಮೆ ಕೋರಿದ್ದೆ. ಮತ್ತೊಮ್ಮೆ ಕೇಳುತ್ತೇನೆ. ಆ ಘಟನೆ ಹೇಗೋ ನಡೆದು ಹೋಯಿತು. ಆದರೆ ಅವರು ವಿವರಿಸಿದಂತೆ ಅಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago