ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ – Vishwanews24
ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ – Vishwanews24
ಉಡುಪಿ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಸೇರಿರುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 17 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.dbcdc.kanataka.gov.in , ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882 ಅಥವಾ ತಾಲೂಕು ವಿಸ್ತೀರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವ0ತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
