ಡೆಹರಾಡೂನ್ (ಉತ್ತರಾಖಂಡ): ಗಂಗಾ ನದಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಿರುವ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಅಲ್ಲಿನ ಹೈಕೋರ್ಟ್ ಸಮರ್ಥಿಸಿಕೊಂಡಿದೆ. ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿರುವ ಹೈಕೋರ್ಟ್, ಪವಿತ್ರ ಗಂಗಾ ನದಿ ತೀರದಲ್ಲಿ ಮಾಂಸ ಮಾರಾಟ ಬ್ಯಾನ್ ಮಾಡಿರುವ ನಿರ್ಧಾರ ಸೂಕ್ತವಾಗಿದೆ ಎಂದು ಸಹಮತ ವ್ಯಕ್ತಪಡಿಸಿದೆ.
ಉತ್ತರಾಖಂಡ ರಾಜ್ಯದ ಉತ್ತರ ಕಾಶಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಗಂಗಾ ನದಿಯ ಎರಡೂ ತೀರಗಳ 500 ಮೀಟರ್ ವ್ಯಾಪ್ತಿಯಲ್ಲಿ ಉತ್ತರಾಖಂಡ ರಾಜ್ಯ ಸರ್ಕಾರದ ಸೂಚನೆಯಂತೆ ಉತ್ತರ ಕಾಶಿ ಜಿಲ್ಲಾ ಪಂಚಾಯತ್ ಮಾಂಸ ಮಾರಾಟ ನಿಷೇಧಿಸಿತ್ತು. ಈ ಭಾಗದಲ್ಲಿ ಇರುವ ಮಾಂಸದ ಅಂಗಡಿಗಳನ್ನು ಸ್ಥಳಾಂತರ ಮಾಡುವಂತೆಯೂ ಸ್ಥಳೀಯ ಆಡಳಿತ ಸೂಚನೆ ನೀಡಿತ್ತು.
ಇದನ್ನೂ ಓದಿ : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 36 ರೂ. ಇಳಿಕೆ – Vishwanews24
ಪಂಚಾಯ್ತಿಯ ಈ ತೀರ್ಮಾನವನ್ನು ಪ್ರಶ್ನಿಸಿ ನಾವೇದ್ ಖುರೇಶಿ ಎಂಬುವರು ಉತ್ತರಾಖಂಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ ಕುಮಾರ್ ಮಿಶ್ರಾ ಅವರಿದ್ದ ಏಕ ಸದಸ್ಯ ಪೀಠ, ಪಂಚಾಯ್ತಿ ಹಾಗೂ ಸರ್ಕಾರದ ತೀರ್ಮಾನ ಸೂಕ್ತವಾಗಿದೆ ಎಂದು ತೀರ್ಪು ನೀಡಿದೆ.
ಉತ್ತರಾಖಂಡ ರಾಜ್ಯ, ಗಂಗಾ ನದಿ ಹಾಗೂ ಉತ್ತರ ಕಾಶಿಗೆ ತನ್ನದೇ ಆದ ಧಾರ್ಮಿಕ ಪಾವಿತ್ರ್ಯತೆ ಇದೆ. ಹೀಗಾಗಿ, ಬಹುಸಂಖ್ಯಾತರ ಭಾವನೆಗಳಿಗೆ ಗೌರವಿಸಿ ಉತ್ತರಾಖಂಡದ ಜಿಲ್ಲಾ ಪಂಚಾಯ್ತಿ ಈ ತೀರ್ಮಾನ ಕೈಗೊಂಡಿದೆ. ಈ ವಿಚಾರದಲ್ಲಿ ಉತ್ತರ ಕಾಶಿ ಜಿಲ್ಲಾ ದಂಡಾಧಿಕಾರಿಗಳಾಗಲೀ, ಜಿಲ್ಲಾ ಪಂಚಾಯ್ತಿಯಾಗಲೀ ಯಾವುದೇ ತಪ್ಪು ಮಾಡಿಲ್ಲ. ಇನ್ನು ಮಾಂಸ ಮಾರಾಟ ಮಾಡಲು ಅನುಮತಿ ನೀಡುವ ಹಂತದಲ್ಲಿಯೂ ಯಾವುದೇ ಲೋಪವಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ : ರಾಜ್ಯಸರ್ಕಾರದ “ಸೂಪರ್ 30” ಯೋಜನೆಗೆ ಆಯ್ಕೆಯಾದ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…