ಡೆಹರಾಡೂನ್ (ಉತ್ತರಾಖಂಡ): ಗಂಗಾ ನದಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಿರುವ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಅಲ್ಲಿನ ಹೈಕೋರ್ಟ್ ಸಮರ್ಥಿಸಿಕೊಂಡಿದೆ. ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿರುವ ಹೈಕೋರ್ಟ್, ಪವಿತ್ರ ಗಂಗಾ ನದಿ ತೀರದಲ್ಲಿ ಮಾಂಸ ಮಾರಾಟ ಬ್ಯಾನ್ ಮಾಡಿರುವ ನಿರ್ಧಾರ ಸೂಕ್ತವಾಗಿದೆ ಎಂದು ಸಹಮತ ವ್ಯಕ್ತಪಡಿಸಿದೆ.
ಉತ್ತರಾಖಂಡ ರಾಜ್ಯದ ಉತ್ತರ ಕಾಶಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಗಂಗಾ ನದಿಯ ಎರಡೂ ತೀರಗಳ 500 ಮೀಟರ್ ವ್ಯಾಪ್ತಿಯಲ್ಲಿ ಉತ್ತರಾಖಂಡ ರಾಜ್ಯ ಸರ್ಕಾರದ ಸೂಚನೆಯಂತೆ ಉತ್ತರ ಕಾಶಿ ಜಿಲ್ಲಾ ಪಂಚಾಯತ್ ಮಾಂಸ ಮಾರಾಟ ನಿಷೇಧಿಸಿತ್ತು. ಈ ಭಾಗದಲ್ಲಿ ಇರುವ ಮಾಂಸದ ಅಂಗಡಿಗಳನ್ನು ಸ್ಥಳಾಂತರ ಮಾಡುವಂತೆಯೂ ಸ್ಥಳೀಯ ಆಡಳಿತ ಸೂಚನೆ ನೀಡಿತ್ತು.
ಇದನ್ನೂ ಓದಿ : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 36 ರೂ. ಇಳಿಕೆ – Vishwanews24
ಪಂಚಾಯ್ತಿಯ ಈ ತೀರ್ಮಾನವನ್ನು ಪ್ರಶ್ನಿಸಿ ನಾವೇದ್ ಖುರೇಶಿ ಎಂಬುವರು ಉತ್ತರಾಖಂಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ ಕುಮಾರ್ ಮಿಶ್ರಾ ಅವರಿದ್ದ ಏಕ ಸದಸ್ಯ ಪೀಠ, ಪಂಚಾಯ್ತಿ ಹಾಗೂ ಸರ್ಕಾರದ ತೀರ್ಮಾನ ಸೂಕ್ತವಾಗಿದೆ ಎಂದು ತೀರ್ಪು ನೀಡಿದೆ.
ಉತ್ತರಾಖಂಡ ರಾಜ್ಯ, ಗಂಗಾ ನದಿ ಹಾಗೂ ಉತ್ತರ ಕಾಶಿಗೆ ತನ್ನದೇ ಆದ ಧಾರ್ಮಿಕ ಪಾವಿತ್ರ್ಯತೆ ಇದೆ. ಹೀಗಾಗಿ, ಬಹುಸಂಖ್ಯಾತರ ಭಾವನೆಗಳಿಗೆ ಗೌರವಿಸಿ ಉತ್ತರಾಖಂಡದ ಜಿಲ್ಲಾ ಪಂಚಾಯ್ತಿ ಈ ತೀರ್ಮಾನ ಕೈಗೊಂಡಿದೆ. ಈ ವಿಚಾರದಲ್ಲಿ ಉತ್ತರ ಕಾಶಿ ಜಿಲ್ಲಾ ದಂಡಾಧಿಕಾರಿಗಳಾಗಲೀ, ಜಿಲ್ಲಾ ಪಂಚಾಯ್ತಿಯಾಗಲೀ ಯಾವುದೇ ತಪ್ಪು ಮಾಡಿಲ್ಲ. ಇನ್ನು ಮಾಂಸ ಮಾರಾಟ ಮಾಡಲು ಅನುಮತಿ ನೀಡುವ ಹಂತದಲ್ಲಿಯೂ ಯಾವುದೇ ಲೋಪವಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ : ರಾಜ್ಯಸರ್ಕಾರದ “ಸೂಪರ್ 30” ಯೋಜನೆಗೆ ಆಯ್ಕೆಯಾದ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…