ಗಂಗೊಳ್ಳಿ : ರಾಜ್ಯದಲ್ಲಿ ಜಾರಿಯಾಗಿರುವ ಗೋಹತ್ಯೆ ನಿಷೇಧ ಕಾನೂನನ್ನು ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಗೋ ಕಳ್ಳತನ, ಗೋಹತ್ಯೆ ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಸುಮಾರು 20 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ತಡೆಯುವ ಪ್ರಕ್ರಿಯೆ ನಿರಂತವಾಗಿದ್ದು, ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು, ಈ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಆರೋಪಿಗಳನ್ನು ಬಂಧಿಸಲಾಗಿದೆ. ನೂರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದರು.
ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಗಂಗೊಳ್ಳಿಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ಜರಗಿದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಂಗೊಳ್ಳಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಸಾಕಷ್ಟು ಸಾಕ್ಷಾಧಾರಗಳಿದ್ದು, ಅಮಾಯಕರಿಗೆ ತೊಂದರೆಯಾದಂತೆ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜದಲ್ಲಿ ಶಾಂತಿ ಕದಡುವ, ಸಮಾಜ ಘಾತುಕ ಶಕ್ತಿಗಳನ್ನು ಬೆಂಬಲಿಸಬಾರದು. ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಾಗರಿಕರು ಇಲಾಖೆಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕಿದೆ. ಕಾನೂನಿಗೆ ಗೌರವ ನೀಡಬೇಕು. ಯಾರೇ ಕಾನೂನಿಗೆ ವಿರುದ್ಧವಾಗಿ ಹೋದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಶ್ರೀಕಾಂತ ಮಾತನಾಡಿ, ಗಂಗೊಳ್ಳಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಈವರೆಗೆ 4 ಪ್ರಕರಣಗಳು ದಾಖಲಾಗಿವೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎರಡೂ ಸಮುದಾಯದ ಮುಖಂಡರು ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ವ್ಯಕ್ತಿಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ಮುಂದಾಗಬಹುದಾದ ಅಹಿತಕರ ಘಟನೆಗಳನ್ನು ತಪ್ಪಿಸಲು ಸಹಕರಿಸಬೇಕು ಎಂದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…