Featured

ಗಂಗೊಳ್ಳಿ : ಉಡುಪಿಯಲ್ಲಿ ಗೋಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿ : ಎಸ್ ಪಿ ವಿಷ್ಣುವರ್ಧನ್ -Vishwanews24

ಗಂಗೊಳ್ಳಿ : ಉಡುಪಿಯಲ್ಲಿ ಗೋಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿ : ಎಸ್ ಪಿ ವಿಷ್ಣುವರ್ಧನ್ -Vishwanews24

ಗಂಗೊಳ್ಳಿ : ರಾಜ್ಯದಲ್ಲಿ ಜಾರಿಯಾಗಿರುವ ಗೋಹತ್ಯೆ ನಿಷೇಧ ಕಾನೂನನ್ನು ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಗೋ ಕಳ್ಳತನ, ಗೋಹತ್ಯೆ ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಸುಮಾರು 20 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ತಡೆಯುವ ಪ್ರಕ್ರಿಯೆ ನಿರಂತವಾಗಿದ್ದು, ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು, ಈ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಆರೋಪಿಗಳನ್ನು ಬಂಧಿಸಲಾಗಿದೆ. ನೂರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದರು.

ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಗಂಗೊಳ್ಳಿಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ಜರಗಿದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಂಗೊಳ್ಳಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಸಾಕಷ್ಟು ಸಾಕ್ಷಾಧಾರಗಳಿದ್ದು, ಅಮಾಯಕರಿಗೆ ತೊಂದರೆಯಾದಂತೆ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜದಲ್ಲಿ ಶಾಂತಿ ಕದಡುವ, ಸಮಾಜ ಘಾತುಕ ಶಕ್ತಿಗಳನ್ನು ಬೆಂಬಲಿಸಬಾರದು. ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಾಗರಿಕರು ಇಲಾಖೆಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕಿದೆ. ಕಾನೂನಿಗೆ ಗೌರವ ನೀಡಬೇಕು. ಯಾರೇ ಕಾನೂನಿಗೆ ವಿರುದ್ಧವಾಗಿ ಹೋದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಶ್ರೀಕಾಂತ ಮಾತನಾಡಿ, ಗಂಗೊಳ್ಳಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಈವರೆಗೆ 4 ಪ್ರಕರಣಗಳು ದಾಖಲಾಗಿವೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎರಡೂ ಸಮುದಾಯದ ಮುಖಂಡರು ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ವ್ಯಕ್ತಿಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ಮುಂದಾಗಬಹುದಾದ ಅಹಿತಕರ ಘಟನೆಗಳನ್ನು ತಪ್ಪಿಸಲು ಸಹಕರಿಸಬೇಕು ಎಂದರು.

Vishwa News 24

Recent Posts

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

7 minutes ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

22 minutes ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

30 minutes ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

1 hour ago

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ – vishwanews24

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…

2 hours ago

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ – vishwanews24

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…

2 hours ago