ಗಂಗೊಳ್ಳಿ : ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ , ಸ್ವಯಂಪ್ರೇರಿತ ಸಂಪೂರ್ಣ ಬಂದ್ -Vishwanews24

Featured, ಉಡುಪಿ

ಗಂಗೊಳ್ಳಿ : ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ , ಸ್ವಯಂಪ್ರೇರಿತ ಸಂಪೂರ್ಣ ಬಂದ್ -Vishwanews24

ಗಂಗೊಳ್ಳಿ : ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಸುತ್ತಿರುವ ಪ್ರತಿಭಟನೆ ಅಂಗವಾಗಿ ಅಕ್ಟೋಬರ್ 1ರ ಶುಕ್ರವಾರ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಜಾನುವಾರು ಹತ್ಯೆ ಹಾಗೂ ಗೋ ಹಂತಕರ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗುತ್ತಿದ್ದಾರೆ. ಮಾತ್ರವಲ್ಲದೆ ಗಂಗೊಳ್ಳಿಯಲ್ಲಿ ಈ ಸಂಬಂಧ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ.

ಗಂಗೊಳ್ಳಿಯ ಮೀನುಗಾರಿಕಾ ಬಂದರು ನಿಂದ ಹೊರಟಿರುವ ಸಾವಿರಕ್ಕೂ ಅಧಿಕ ಜನರು ಪ್ರಮುಖ ಬೀದಿಗಳ ಮೂಲಕ ಸಾಗಿ ಬಂದು ರಾಮಮಂದಿರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಮೆರವಣಿಗೆ ಮಾರ್ಗ ಮಧ್ಯೆ ಮಾತಿನ ಚಕಮಕಿ ಉಂಟಾಗಿದ್ದು ಸ್ಥಳಕ್ಕೆ ಧಾವಿಸಿದ ಡಿ.ವೈ.ಎಸ್.ಪಿ ಶ್ರೀಕಾಂತ್, ವ್ರತ್ತನೀರಿಕ್ಷಕ ಸಂತೋಷ್ ಕಾಯ್ಕಿಣಿ ಘಟನೆ ಪರಿಸ್ಥಿತಿ ಹತೋಟಿಗೆ ತಂದರು.

ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಪ್ರತಿಭಟನಾ ನಿರತರು ಗೋ ಕಳ್ಳರ ವಿರುದ್ಧ ಆಕ್ರೋಶದ ಘೋಷಣೆ‌ ಕೂಗಿದ್ದಾರೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ.