ಗಂಗೊಳ್ಳಿ : ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಸುತ್ತಿರುವ ಪ್ರತಿಭಟನೆ ಅಂಗವಾಗಿ ಅಕ್ಟೋಬರ್ 1ರ ಶುಕ್ರವಾರ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಜಾನುವಾರು ಹತ್ಯೆ ಹಾಗೂ ಗೋ ಹಂತಕರ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗುತ್ತಿದ್ದಾರೆ. ಮಾತ್ರವಲ್ಲದೆ ಗಂಗೊಳ್ಳಿಯಲ್ಲಿ ಈ ಸಂಬಂಧ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ.
ಗಂಗೊಳ್ಳಿಯ ಮೀನುಗಾರಿಕಾ ಬಂದರು ನಿಂದ ಹೊರಟಿರುವ ಸಾವಿರಕ್ಕೂ ಅಧಿಕ ಜನರು ಪ್ರಮುಖ ಬೀದಿಗಳ ಮೂಲಕ ಸಾಗಿ ಬಂದು ರಾಮಮಂದಿರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಮೆರವಣಿಗೆ ಮಾರ್ಗ ಮಧ್ಯೆ ಮಾತಿನ ಚಕಮಕಿ ಉಂಟಾಗಿದ್ದು ಸ್ಥಳಕ್ಕೆ ಧಾವಿಸಿದ ಡಿ.ವೈ.ಎಸ್.ಪಿ ಶ್ರೀಕಾಂತ್, ವ್ರತ್ತನೀರಿಕ್ಷಕ ಸಂತೋಷ್ ಕಾಯ್ಕಿಣಿ ಘಟನೆ ಪರಿಸ್ಥಿತಿ ಹತೋಟಿಗೆ ತಂದರು.
ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಪ್ರತಿಭಟನಾ ನಿರತರು ಗೋ ಕಳ್ಳರ ವಿರುದ್ಧ ಆಕ್ರೋಶದ ಘೋಷಣೆ ಕೂಗಿದ್ದಾರೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…