ಬೆಂಗಳೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ಮೃತರ ಸರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.
ಕಳೆದ ಮಂಗಳವಾರ (ಜುಲೈ 15) ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು ಜೀವಂತವಾಗಿ ವಾಪಸ್ ಬರದ ವಿಷಯ ಕೇಳಿ ತೀವ್ರ ದುಃಖವಾಯಿತು. ಮೃತರಾದ ರೋಹಿತ್ ಖಾರ್ವಿ, ಸುರೇಶ್ ಖಾರ್ವಿ ಹಾಗೂ ಜಗನ್ನಾಥ್ ಖಾರ್ವಿ ಅವರ ಕುಟುಂಬ ವರ್ಗದವರನ್ನು ಶೀಘ್ರವೇ ಭೇಟಿಯಾಗಿ ಸಾಂತ್ವನ ಹೇಳುವೆ ಎಂದು ಸಚಿವರು ಹೇಳಿದ್ದಾರೆ.
ಸರಕಾರದಿಂದ ಹೆಚ್ಚಿನ ಪರಿಹಾರ:
ಶೀಘ್ರದಲ್ಲಿ ಉಡುಪಿ ಜಿಲ್ಲೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ತುಂಬುವ ಕೆಲಸ ಮಾಡಲಿದ್ದೇನೆ. ಜೊತೆಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಾಮಾಣಿಕ ಕೆಲಸ ಮಾಡಲಿದ್ದೇನೆ. ದುಃಖದ ಈ ಸಮಯದಲ್ಲಿ ಮೃತರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾದ್ದೇನೆ. ಅಗಲಿದ ಆತ್ಮಗಳಿಗೆ ಭಗವಂತ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಪ್ರಾರ್ಥಿಸುತ್ತೇನೆ. ಹಾಗೂ ಕುಟುಂಬಸ್ಥರು ಯಾವುದೇ ಕಾರಣಕ್ಕೆ ಧೈರ್ಯವನ್ನು ಕಳೆದುಕೊಳ್ಳಬಾರದು ಎಂದು ವಿನಂತಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…