Featured

ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ ಗುತ್ತಿಗೆದಾರ, ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ : ಯಶ್‌ಪಾಲ್ ಸುವರ್ಣ ಆಗ್ರಹ – Vishwanews24

ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ ಗುತ್ತಿಗೆದಾರ, ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ : ಯಶ್‌ಪಾಲ್ ಸುವರ್ಣ ಆಗ್ರಹ

ಗಂಗೊಳ್ಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಸುಮಾರು ೧೨ ಕೋಟಿ ವೆಚ್ಚದಲ್ಲಿ ನೂತನ ಮೀನುಗಾರಿಕೆ ಜೆಟ್ಟಿ ಅವೈಜ್ಞಾನಿಕ ಕಾಮಗಾರಿಯಿಂದ ನಿರ್ಮಾಣ ಹಂತದಲ್ಲೇ ಕುಸಿತಗೊಂಡು ಸಾವಿರಾರು ಮೀನುಗಾರರು ಸಂಕಷ್ಟಕ್ಕೀಡಾಗಿದ್ದು, ಸರಕಾರ ಕೂಡಲೇ ಗುತ್ತಿಗೆದಾರ ಕಂಪೆನಿ
ಹಾಗೂ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಬೈಂದೂರು ಶಾಸಕ ಬಿ. ಎಂ ಸುಕುಮಾರ್ ಶೆಟ್ಟಿ ಹಾಗೂ ಸಂಸದ ಬಿ. ವೈ. ರಾಘವೇಂದ್ರ ರವವರ ವಿಶೇಷ ಮುತುವರ್ಜಿಯಿಂದ ಮ0ಜೂರುಗೊ0ಡ ಈ ಮಹತ್ವದ ಯೋಜನೆ ಅಧಿಕಾರಿಗಳ ನಿರ್ಲಕ್ಷö್ಯ ಮತ್ತು ಗುತ್ತಿಗೆದಾರ ಅವೈಜ್ಞಾನಿಕ ಕಾಮಗಾರಿಯಿಂದ ಕುಸಿತಗೊ0ಡು ನಾಡದೋಣಿ, ಟ್ರಾಲ್ ಬೋಟ್ ಸಹಿತ ಸಾವಿರಾರು ಮಂದಿ ಮೀನುಗಾರರಿಗೆ ಸಮಸ್ಯೆ ಸೃಷ್ಟಿಯಾಗಿದ್ದು, ಸ್ಥಳೀಯ ಮೀನುಗಾರರು ಮೀನುಗಾರಿಕೆಗೆ ದೂರದ ಭಟ್ಕಳ ಬಂದರನ್ನು
ಆಶ್ರಯಿಸುವ0ತಾಗಿದೆ. ಈಗಾಗಲೇ ಈ ಗುತ್ತಿಗೆದಾರ ನಡೆಸಿರುವ ಹಲವು ಕಾಮಗಾರಿಗಳಲ್ಲೂ ಹಲವು ಸಮಸ್ಯೆಗಳು ಗೋಚರಿಸಿದ್ದು, ಎಲ್ಲಾ
ಟೆಂಡರ್‌ಗಳನ್ನು ರದ್ದುಗೊಳಿಸಿ ಎಲ್ಲಾ ಕಾಮಗಾರಿಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತಮಿಳುನಾಡು ರಾಜ್ಯದ ಮಾದರಿಯಲ್ಲೇ ಮೀನುಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ಇಂಜಿನಿಯರಿAಗ್ ವಿಭಾಗವನ್ನು ಆರಂಭಿಸಿ ಇಲಾಖೆಯ ಎಲ್ಲಾ ಕಾಮಗಾರಿಗಳು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಲು ಸರಕಾರ ಯೋಜನೆ ರೂಪಿಸುವ ಅವಶ್ಯಕತೆಯಿದ್ದು, ಈ ಮೂಲಕ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಮೀನುಗಾರಿಕೆ ಅಭಿವೃಧ್ದಿಗೆ ಪೂರಕ ಯೋಜನೆಗಳು ಮೀನುಗಾರರ ಅವಶ್ಯಕತೆಯ ತಕ್ಕಂತೆ ನಿರ್ಮಾಣಗೊಳ್ಳಲು ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಮೀನುಗಾರಿಕೆ ಇಲಾಖೆಯ ಕಾಮಗಾರಿಗಳ ಅನುಷ್ಠಾನ ಹಂತದಲ್ಲಿ ಅನುಭವಿ ಮೀನುಗಾರರನ್ನೊಳಗೊಂಡ ಮೇಲುಸ್ತುವಾರಿ ಸಮಿತಿಯನ್ನು ರಚಿಸಿ ಮೂಲಕ ಕಾಮಗಾರಿಯನ್ನು ಪ್ರತಿ ಹಂತದಲ್ಲಿ ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಡೆಸಲು ಅನುವು ಮಾಡಬೇಕು.
ಪ್ರಧಾನಿ ನರೇಂದ್ರ ಮೋದಿಯವರು ಮೀನುಗಾರಿಕೆ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಸಾಗರಮಾಲಾ, ಪ್ರಧಾನ ಮಂತ್ರಿ ಮತ್ಸö್ಯಸAಪದ ಯೋಜನೆಗಳ ಮೂಲಕ ಕರಾವಳಿಯ ೩ ಜಿಲ್ಲೆಗಳಲ್ಲಿ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ಅನುಷ್ಠಾನದ ಹಂತದಲ್ಲಿದ್ದು ಈ ಎಲ್ಲಾ
ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನ ನಡೆಸಲು ಸರಕಾರ ವಿಶೇಷ ಮುತುವರ್ಜಿ ವಹಿಸಿ ಮೀನುಗಾರರಿಗೆ ಸಕಾಲದಲ್ಲಿ ಯೋಜನೆಯ
ಉಪಯೋಗವಾಗುವಂತೆ ಮಾಡಬೇಕು.

ಇದನ್ನೂ ಓದಿ: ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ..

ಗಂಗೊಳ್ಳಿಯ0ತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಮುನ್ನೆಚರಿಕೆ ವಹಿಸಿ, ಇಲಾಖೆಯ ಸಚಿವರಿಗೆ, ಸ್ಥಳೀಯ ಸಂಸದರು ಹಾಗೂ ಶಾಸಕರ ಮೀನುಗಾರರ ಪರ ಕಾಳಜಿಗೆ ಕಪ್ಪು ಚುಕ್ಕೆ ಬರದಂತೆ ಕಾರ್ಯನಿರ್ವಹಿಸಿ, ಗಂಗೊಳ್ಳಿ ಜೆಟ್ಟಿ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ವೈಜ್ಞಾನಿಕ ರೀತಿಯಲ್ಲಿಮರುಪ್ರಾರಂಭಿಸಿ ಮೀನುಗಾರಿಕೆ ಚಟುವಟಿಕೆಗೆ ಅನುಕೂಲ ಮಾಡಲು ಕ್ರಮಕೈಗೊಳ್ಳುವಂತೆ ಸಮಸ್ತ ಮೀನುಗಾರರ ಪರವಾಗಿ ಆಗ್ರಹಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago