Featured

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ  ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ (ಏ.17) ರಾತ್ರಿ ಗ್ರಾಮದ ಹೊರವಲಯದ ನಿರ್ಮಾಣ ಹಂತದ ಮನೆಯೊಂದರ ಬಳಿ ನಾನ್​ ವೆಜ್​ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ವೇಳೆ ಸಚಿನ್, ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ವಾಪಸ್ಸಾಗಿದ್ದರು. ಶುಕ್ರವಾರ (ಏ.18) ಮುಂಜಾನೆ ಕಾಮಗಾರಿ ಮುಂದುವರಿಸಲು ಕೆಲಸಗಾರರು ಕಟ್ಟಡದ ಬಳಿ ಬಂದಾಗ, ಸಚಿನ್ ಅಲ್ಲಿ ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: 

ಈ ವಿಚಾರ ತಿಳಿದ ತಕ್ಷಣ ಸಚಿನ್‌ನ ಕುಟುಂಬದವರು ಆತಂಕಗೊಂಡು ಶವವನ್ನು ಶಿವಮೊಗ್ಗಕ್ಕೆ ಕೊಂಡೊಯ್ದಿದ್ದರು. ಘಟನೆಯ ಕುರಿತು ಗ್ರಾಮಸ್ಥರು ಕುಂಸಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

11 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago