Featured

ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – Vishwanews24

ಮದುವೆಯಾದ ಬಳಿಕ ಬಯಲಾಯ್ತು ಪತಿಯ ಅಕ್ರಮ ಸಂಬಂಧ ; ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್‍ನಲ್ಲಿ ನಡೆದಿದೆ.

ಐಟಿ ಉದ್ಯಮಿ ಆಗಿರುವ ಶ್ವೇತಾ (27) ನ.10ರಂದು ನೇಣಿಗೆ ಶರಣಾಗಿದ್ದಾಳೆ. ಐಬಿಎಂ ಕಂಪನಿಯ ಉದ್ಯೋಗಿಯಾಗಿದ್ದ ಶ್ವೇತಾ 11 ತಿಂಗಳ ಹಿಂದಷ್ಟೇ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಆದರೆ ಮದುವೆಗೂ ಮುನ್ನ ಅಭಿಷೇಕ್‍ಗೆ ಯುವತಿಯೊಬ್ಬಳೊಂದಿಗೆ ಸಂಬಂಧವಿತ್ತು ಎನ್ನುವ ವಿಷಯವು ಶ್ವೇತಾಳಿಗೆ ಮದುವೆಯಾದ ಬಳಿಕ ತಿಳಿದಿದೆ. ಈ ವಿಚಾರ ಗೊತ್ತಾದ ಬಳಿಕ ಶ್ವೇತಾ ಹಾಗೂ ಅಭಿಷೇಕ್ ಮಧ್ಯೆ ಪ್ರತಿನಿತ್ಯ ಜಗಳವಾಗುತ್ತಿತ್ತು.

📛 ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಫೋಟ: ಇನ್ನೆರೆಡು ದಿನಗಳಲ್ಲಿ ಪ್ರಕರಣ NIAಗೆ ಹಸ್ತಾಂತರಿಸಲು ಕ್ರಮ: ಆರಗ ಜ್ಞಾನೇಂದ್ರ – Vishwanews24

ಅದಾದ ಬಳಿಕ ಪರಸ್ಪರ ರಾಜಿ ಪಂಚಾಯತಿ ನಡೆದಿತ್ತು. ಆ ನಂತರ ಅಭಿಷೇಕ್ ಹಾಗೂ ಶ್ವೇತಾ ಇಬ್ಬರೂ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ನಡುವೆ ಅಭಿಷೇಕ್ ತನ್ನ ಹಳೆಯ ಚಾಳಿಯನ್ನೇ ಪುನಃ ಮುಯಂದುವರಿಸಿದ್ದಾನೆ. ಇದರಿಂದಾಗಿ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪಗಳು ಮೃತ ಶ್ವೇತಾಳ ಕುಟುಂಬದಿಂದ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾಳ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಪತ್ನಿಯ ಅಂತ್ಯ ಸಂಸ್ಕಾರದ ಬಳಿಕ ಅಭಿಷೇಕ್ ಸತ್ಯ ಒಪ್ಪಿಕೊಂಡಿದ್ದು, ಮದುವೆಗೂ ಮುನ್ನ ಇನ್ನೋರ್ವ ಯುವತಿಯ ಜೊತೆ ಸಂಬಂಧ ಹೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

✴️ ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟು ನಿಷೇಧ.. 💥 ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ – Vishwanews24

ಶ್ವೇತಾಳೊಂದಿಗೆ ಮದುವೆ ನಿಶ್ಚಯವಾದ ನಂತರವೂ ಅದೇ ಯುವತಿಯೊಂದಿಗೆ ಟೂರ್ ಹೋಗಿದ್ದ. ಅಷ್ಟೇ ಅಲ್ಲದೇ ಮದುವೆಯ ನಂತರವೂ ಅನೈತಿಕ ಸಂಬಂಧ ಮುಂದುವರಿಸಿದ್ದ. ಈ ವಿಚಾರ ತಿಳಿದು ಶ್ವೇತಾ ಗಲಾಟೆ ಮಾಡಿದ್ದಳು. ಆ ಬಳಿಕ ಪತ್ನಿಯ ಬಳಿ ಕ್ಷಮೆಯಾಚಿಸಿ ಸುಮ್ಮನಾಗಿರುವ ಬಗ್ಗೆ ತಿಳಿಸಿದ್ದಾನೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago