ಉಡುಪಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲೆಯ ಮೂರು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಪು ಶ್ರೀ ಹಳೆ ಮಾರಿಗುಡಿ ಬ್ರಹ್ಮಕಲಶೋತ್ಸವ ಗದ್ದುಗೆ ಪ್ರತಿಷ್ಠೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ನಾಯಕರ ಸಭೆ, ಕಾರ್ಕಳದಲ್ಲಿ ನಡೆಯಲಿರುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಇದೇ ಸಂದರ್ಭದಲ್ಲಿ ಕಾರ್ಕಳ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ವಿಭಿನ್ನವಾಗಿ ಡಿಕೆ ಶಿವಕುಮಾರ್ಗೆ ಸ್ವಾಗತ ಕೋರಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನ ಮಾಡುತ್ತಿರುವ ಡಿಕೆ ಶಿವಕುಮಾರ್ಗೆ ಹಿಂದುತ್ವದ ಭದ್ರ ಕೋಟೆಗೆ ಸ್ವಾಗತ ಎಂದು ಸುನಿಲ್ ಕುಮಾರ್ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದರೂ ಕುಂಭ ಮೇಳದಲ್ಲಿ ಮಿಂದ, ಎಐಸಿಸಿ ಮುನಿಸಿನ ಮಧ್ಯೆಯೂ ಈಶಾ ಫೌಂಡೇಶನ್ ಶಿವರಾತ್ರಿಯಲ್ಲಿ ನಿಂದ, ಹಿಂದುವಾಗಿ ಹುಟ್ಟಿ ಹಿಂದುವಾಗಿಯೇ ಸಾಯುವೆ ಎಂದ, ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನಸ್ಸು ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗಂಡುಮೆಟ್ಟಿನ ನೆಲ, ಹಿಂದುತ್ವದ ಭದ್ರಕೋಟೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆತ್ಮೀಯ ಸ್ವಾಗತ. ನಿಮ್ಮ ಈ ಭೇಟಿ ಹಿಂದುತ್ವ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಫಲಪ್ರದವಾಗಲಿ’’ ಎಂದು ಸುನಿಲ್ ಕುಮಾರ್ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…