Featured

ಗಜರಾಜನಿಗೆ ಡಿಕ್ಕಿಯಾದ ಖಾಸಗಿ ಬಸ್ ; ದಸರಾ ಆನೆ ರಂಗ ದುರ್ಮರಣ..

ಮಡಿಕೇರಿ: ದಸರಾಗೆ ತೆರಳಬೇಕಿದ್ದ ಸಾಕಾನೆಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಗಾಯಗೊಂಡಿದ್ದ ದಸರಾ ಆನೆ ಮೃತಪಟ್ಟಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮತ್ತಿಗೋಡು ಆನೆ ಶಿಬಿರದ 45 ವರ್ಷ ವಯಸ್ಸಿನ ರಂಗ ಎನ್ನುವ ಸಾಕಾನೆಯ ಸೊಂಟ ಮುರಿದಿದೆ. ಮಾವುತರು ಎಂದಿನಂತೆ ಭಾನುವಾರ ರಾತ್ರಿ ರಂಗನನ್ನು ತಿರುಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಆನೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆನೆ ಸ್ಥಳದಲ್ಲೇ ಕುಸಿದು ಬಿದ್ದು, ಸೊಂಟ ಮುರಿದಿತ್ತು

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಾವುತರು ಹಾಗೂ ಪುಶುವೈದ್ಯ ಡಾ.ಮುಜೀಬ್ ಸಹಾಯದಿಂದ ಆನೆಗೆ ಚಿಕಿತ್ಸೆ ನೀಡಿ, ಶಿಬಿರಕ್ಕೆ ಕರೆತರಲಾಗಿತ್ತು. ಆದ್ರೆ ತೀವ್ರ ಗಾಯಗೊಂಡಿದ್ದ ಆನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಪುಂಡಾಟ ನಡೆಸುತ್ತಿದ್ದ  ಆನೆಯನ್ನು   ಸೆರೆ ಹಿಡಿದು, ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿತ್ತು. ರೌಡಿ ರಂಗ ಎಂದೇ ಹೆಸರು ಪಡೆದಿತ್ತು.

ಇನ್ನೆರಡು ದಿನ ಕಳೆದಿದ್ದರೆ ರಂಗ ದಸರಾದಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು.  ಇನ್ನು ಘಟನೆ ಸಂಬಂಧ ಖಾಸಗಿ ಬಸ್ ಚಾಲಕನ ವಿರುದ್ಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Vishwa News 24

Recent Posts

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

13 minutes ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago