ನವದೆಹಲಿ: ಕಳೆದ ವರ್ಷ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಗಿದ್ದ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ದೆಹಲಿಯ ಬೈಪಾಸ್ನ ಕುಂಡ್ಲಿ -ಮನೇಸರ್ – ಪಲ್ವಾಲ್ ಎಕ್ಸ್ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳದ ದೃಶ್ಯಗಳಲ್ಲಿ ಟ್ರೇಲರ್ ಟ್ರಕ್ನ ಹಿಂಭಾಗಕ್ಕೆ ಬಿಳಿ ಬಣ್ಣದ ಮಹೀಂದ್ರಾ ಸ್ಕಾರ್ಪಿಯೊ ಗುದ್ದಿರುವುದು ಕಾಣಬಹುದಾಗಿದೆ. ಅದರಲ್ಲೂ ಕಾರಿನ ಡ್ರೈವರ್ ಸೈಡ್ ಸಂಪೂರ್ಣವಾಗಿ ನಜ್ಜಗುಜ್ಜಾಗಿದೆ.
ನಟ ದೀಪ್ ಸಿಧು ದೆಹಲಿಯಿಂದ ಪಂಜಾಬ್ನ ಭಟಿಂಡಾಗೆ ಸ್ಕಾರ್ಪಿಯೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ನಿನ್ನೆ ರಾತ್ರಿ 9:30ರ ಸುಮಾರಿಗೆ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಧುವನ್ನು ಆಸ್ಪತ್ರೆಗೆ ತರುವ ವೇಳೆಯಲ್ಲಿಯೇ ಅವರು ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪ್ರತಿಭಟನಾಕಾರರು ಕೆಂಪು ಕೋಟೆಗೆ ಬಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ ನಂತರ ಹಿಂಸಾಚಾರಕ್ಕೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಸಿಧು ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ನವೆಂಬರ್ 2021 ರಲ್ಲಿ ಕೇಂದ್ರವು ಹಿಂತೆಗೆದುಕೊಂಡ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…