Featured

ಗಣರಾಜ್ಯೋತ್ಸವದ ದಿನದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ -Vishwanews24

ಗಣರಾಜ್ಯೋತ್ಸವದ ದಿನದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ -Vishwanews24

ಅಯೋಧ್ಯೆ: ಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ.

ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಿಸಲಿರುವ ಮಸೀದಿಗೆ ಅಯೋಧ್ಯೆಯಲ್ಲಿ 5 ಎಕರೆ ಜಮೀನನ್ನು ಮೀಸಲಿಡಲಾಗಿದ್ದು, 7 ದಶಕಗಳ ಹಿಂದೆ ಜಾರಿಗೆ ಬಂದ ಭಾರತದ ಸಂವಿಧಾನದ ದಿನವೇ ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ ಅದೇ ದಿನ ಶಂಕುಸ್ಥಾಪನೆ ನೆರವೇರಲಿದೆ ಎಂದು ಇಂಡೊ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತರ್ ಹುಸೇನ್ ತಿಳಿಸಿದ್ದಾರೆ.

ಮಸೀದಿ ಸಂಕೀರ್ಣ ನಿರ್ಮಾಣಕ್ಕೆ ನೀಲನಕ್ಷೆ ಸಿದ್ದವಾಗಿದ್ದು ಅದರಲ್ಲಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡುಗೆಮನೆ, ಲೈಬ್ರೆರಿ ಇರುತ್ತದೆ, ಅದನ್ನು ಐಐಸಿಎಫ್ ಇದೇ 19ರಂದು ಅನಾವರಣಗೊಳಿಸಲಿದೆ. ಮಸೀದಿಯೊಳಗೆ ಒಂದು ಬಾರಿಗೆ 2 ಸಾವಿರ ಮಂದಿ ಸೇರುವ ಸಾಮರ್ಥ್ಯವಿರುತ್ತದೆ, ದುಂಡಗಿನ ಆಕಾರದಲ್ಲಿ ಮಸೀದಿಯ ರಚನೆಯಿರುತ್ತದೆ ಎಂದು ಮುಖ್ಯ ವಾಸ್ತುಶಿಲ್ಪಿ ಪ್ರೊ.ಎಸ್ ಎಂ ಅಖ್ತರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇದು ಇಸ್ಲಾಂ ಧರ್ಮದ ನಿಜವಾದ ಉತ್ಸಾಹದಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸಲಿದೆ ಎಂದು ಅಖ್ತರ್ ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago