Featured

ಗಣರಾಜ್ಯೋತ್ಸವದ ದಿನದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ -Vishwanews24

ಗಣರಾಜ್ಯೋತ್ಸವದ ದಿನದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ -Vishwanews24

ಅಯೋಧ್ಯೆ: ಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ.

ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಿಸಲಿರುವ ಮಸೀದಿಗೆ ಅಯೋಧ್ಯೆಯಲ್ಲಿ 5 ಎಕರೆ ಜಮೀನನ್ನು ಮೀಸಲಿಡಲಾಗಿದ್ದು, 7 ದಶಕಗಳ ಹಿಂದೆ ಜಾರಿಗೆ ಬಂದ ಭಾರತದ ಸಂವಿಧಾನದ ದಿನವೇ ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ ಅದೇ ದಿನ ಶಂಕುಸ್ಥಾಪನೆ ನೆರವೇರಲಿದೆ ಎಂದು ಇಂಡೊ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತರ್ ಹುಸೇನ್ ತಿಳಿಸಿದ್ದಾರೆ.

ಮಸೀದಿ ಸಂಕೀರ್ಣ ನಿರ್ಮಾಣಕ್ಕೆ ನೀಲನಕ್ಷೆ ಸಿದ್ದವಾಗಿದ್ದು ಅದರಲ್ಲಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡುಗೆಮನೆ, ಲೈಬ್ರೆರಿ ಇರುತ್ತದೆ, ಅದನ್ನು ಐಐಸಿಎಫ್ ಇದೇ 19ರಂದು ಅನಾವರಣಗೊಳಿಸಲಿದೆ. ಮಸೀದಿಯೊಳಗೆ ಒಂದು ಬಾರಿಗೆ 2 ಸಾವಿರ ಮಂದಿ ಸೇರುವ ಸಾಮರ್ಥ್ಯವಿರುತ್ತದೆ, ದುಂಡಗಿನ ಆಕಾರದಲ್ಲಿ ಮಸೀದಿಯ ರಚನೆಯಿರುತ್ತದೆ ಎಂದು ಮುಖ್ಯ ವಾಸ್ತುಶಿಲ್ಪಿ ಪ್ರೊ.ಎಸ್ ಎಂ ಅಖ್ತರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇದು ಇಸ್ಲಾಂ ಧರ್ಮದ ನಿಜವಾದ ಉತ್ಸಾಹದಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸಲಿದೆ ಎಂದು ಅಖ್ತರ್ ಹೇಳಿದರು.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

32 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

54 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

2 hours ago