ಗಣರಾಜ್ಯೋತ್ಸವ ದಿನದ ಧ್ವಜಾರೋಹಣ : ದ. ಕ ಜಿಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿಯಲ್ಲಿ ಎಸ್ ಅಂಗಾರ -Vishwanews24
ಗಣರಾಜ್ಯೋತ್ಸವ ದಿನದ ಧ್ವಜಾರೋಹಣ : ದ. ಕ ಜಿಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿಯಲ್ಲಿ ಎಸ್ ಅಂಗಾರ -Vishwanews24
ಉಡುಪಿ: ಗಣರಾಜ್ಯೋತ್ಸವ ದಿನದಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ರಾಜ್ಯ ಸರಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಧ್ವಜಾರೋಹಣ ಮಾಡಲಿದ್ದು, ಇತ್ತೀಚೆಗೆ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಅವಕಾಶ ಪಡೆದಿರುವ ಸುಳ್ಯ ಶಾಸಕ ಹಾಗೂ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರಿಗೆ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
