ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರ ಟ್ರಾಕ್ಟರ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಹಾಗೂ ಕೆಲ ಕಿಡಿಗೇಡಿಗಳು ಕೆಂಪುಕೋಟೆಗೆ ಲಗ್ಗೆ ಇಟ್ಟು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಷಾದ ವ್ಯಕ್ತಪಡಿಸಿದರು.
ದೇಶದ ಸಂವಿಧಾನವು ನಮಗೆ ಅಭಿಪ್ರಾಯ ಸ್ವಾತಂತ್ರ್ಯ ನೀಡಿದೆ. ಅದೇ ಸಂವಿಧಾನವು ಕಾನೂನು ಕಟ್ಟಳೆಗಳನ್ನ ಗಂಭೀರವಾಗಿ ಪಾಲನೆ ಮಾಡಬೇಕೆಂದು ಹೇಳುತ್ತದೆ. ಇದನ್ನು ಮರೆತು ಜನರು ಸ್ವಾತಮತ್ರ್ಯವನ್ನು ದುರುಪಯೋಗ ಮಾಡಿಕೊಳ್ಳುವುದು ದುರದೃಷ್ಟಕರ ಎಂದು ಕೋವಿಂದ್ ಅಭಿಪ್ರಾಯಪಟ್ಟರು.
ರೈತರ ಸಮಸ್ಯೆ ಮತ್ತು ಪ್ರತಿಭಟನೆಗಳ ವಿಚಾರವನ್ನು ಇನ್ನಷ್ಟು ವಿಸ್ತೃತವಾಗಿ ಪ್ರಸ್ತಾಪಿಸಿದ ರಾಮನಾಥ್ ಕೋವಿಂದ್, ತಮ್ಮ ಸರ್ಕಾರ ಮೂರು ಕೃಷಿ ಕಾನೂನುಗಳನ್ನ ರಚಿಸುವ ಮುನ್ನ ಅಸ್ತಿತ್ವದಲ್ಲಿದ್ದ ರೈತರ ಹಕ್ಕು ಮತ್ತು ಸೌಲಭ್ಯಗಳಿಗೆ ಕತ್ತರಿ ಹಾಕಿಲ್ಲ. ಬದಲಾಗಿ ಈ ಮೂರು ಕೃಷಿ ಕಾಯ್ದೆಗಳು ರೈತರಿಗೆ ಹೊಸ ಸೌಲಭ್ಯ ಮತ್ತು ಹಕ್ಕುಗಳನ್ನ ಒದಗಿಸಿದೆ. ಸಂಸತ್ನಲ್ಲಿ ಚರ್ಚೆಯ ಬಳಿಕ ಈ ಮೂರು ಕಾನೂನುಗಳನ್ನ ಜಾರಿಗೆ ತಂದ ನಂತರ ರೈತರಿಗೆ ಇದರ ಲಾಭ ಸಿಗಲು ಆರಂಭವಾಗಿದೆ ಎಂಬುದನ್ನ ವಿವರಿಸಿದರು.
ಆತ್ಮನಿರ್ಭರ್ (ಸ್ವಾವಲಂಬನೆ) ಭಾರತ್ ಗುರಿಯು ಕೃಷಿ ಕ್ಷೇತ್ರಕ್ಕೂ ಅನ್ವಯ ಆಗುತ್ತದೆ. ಸರ್ಕಾರದ ಗಮನ ಈ ನಿಟ್ಟಿನಲ್ಲೂ ಇದೆ. ಸ್ವಾಮಿನಾಥನ್ ಆಯೋಗದ ಶಿಫಾರಸಿನ ಪ್ರಕಾರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿ ಮಾಡಲು ಸರ್ಕಾರ ನಿರ್ಧರಿಸಿದೆ. ಸಣ್ಣ ಹಾಗೂ ಅತಿಸಣ್ಣ ರೈತರು ನನ್ನ ಸರ್ಕಾರಕ್ಕೆ ಆದ್ಯತೆಯಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಇಂಥ ಸಣ್ಣ ರೈತರ ಖಾತೆಗಳಿಗೆ ಸರ್ಕಾರ 1.13 ಕೋಟಿ ರೂ ಹಣ ನೇರವಾಗಿ ವರ್ಗಾವಣೆ ಆಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ತಿಳಿಸಿದರು.
ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…