ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರ ಟ್ರಾಕ್ಟರ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಹಾಗೂ ಕೆಲ ಕಿಡಿಗೇಡಿಗಳು ಕೆಂಪುಕೋಟೆಗೆ ಲಗ್ಗೆ ಇಟ್ಟು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಷಾದ ವ್ಯಕ್ತಪಡಿಸಿದರು.
ದೇಶದ ಸಂವಿಧಾನವು ನಮಗೆ ಅಭಿಪ್ರಾಯ ಸ್ವಾತಂತ್ರ್ಯ ನೀಡಿದೆ. ಅದೇ ಸಂವಿಧಾನವು ಕಾನೂನು ಕಟ್ಟಳೆಗಳನ್ನ ಗಂಭೀರವಾಗಿ ಪಾಲನೆ ಮಾಡಬೇಕೆಂದು ಹೇಳುತ್ತದೆ. ಇದನ್ನು ಮರೆತು ಜನರು ಸ್ವಾತಮತ್ರ್ಯವನ್ನು ದುರುಪಯೋಗ ಮಾಡಿಕೊಳ್ಳುವುದು ದುರದೃಷ್ಟಕರ ಎಂದು ಕೋವಿಂದ್ ಅಭಿಪ್ರಾಯಪಟ್ಟರು.
ರೈತರ ಸಮಸ್ಯೆ ಮತ್ತು ಪ್ರತಿಭಟನೆಗಳ ವಿಚಾರವನ್ನು ಇನ್ನಷ್ಟು ವಿಸ್ತೃತವಾಗಿ ಪ್ರಸ್ತಾಪಿಸಿದ ರಾಮನಾಥ್ ಕೋವಿಂದ್, ತಮ್ಮ ಸರ್ಕಾರ ಮೂರು ಕೃಷಿ ಕಾನೂನುಗಳನ್ನ ರಚಿಸುವ ಮುನ್ನ ಅಸ್ತಿತ್ವದಲ್ಲಿದ್ದ ರೈತರ ಹಕ್ಕು ಮತ್ತು ಸೌಲಭ್ಯಗಳಿಗೆ ಕತ್ತರಿ ಹಾಕಿಲ್ಲ. ಬದಲಾಗಿ ಈ ಮೂರು ಕೃಷಿ ಕಾಯ್ದೆಗಳು ರೈತರಿಗೆ ಹೊಸ ಸೌಲಭ್ಯ ಮತ್ತು ಹಕ್ಕುಗಳನ್ನ ಒದಗಿಸಿದೆ. ಸಂಸತ್ನಲ್ಲಿ ಚರ್ಚೆಯ ಬಳಿಕ ಈ ಮೂರು ಕಾನೂನುಗಳನ್ನ ಜಾರಿಗೆ ತಂದ ನಂತರ ರೈತರಿಗೆ ಇದರ ಲಾಭ ಸಿಗಲು ಆರಂಭವಾಗಿದೆ ಎಂಬುದನ್ನ ವಿವರಿಸಿದರು.
ಆತ್ಮನಿರ್ಭರ್ (ಸ್ವಾವಲಂಬನೆ) ಭಾರತ್ ಗುರಿಯು ಕೃಷಿ ಕ್ಷೇತ್ರಕ್ಕೂ ಅನ್ವಯ ಆಗುತ್ತದೆ. ಸರ್ಕಾರದ ಗಮನ ಈ ನಿಟ್ಟಿನಲ್ಲೂ ಇದೆ. ಸ್ವಾಮಿನಾಥನ್ ಆಯೋಗದ ಶಿಫಾರಸಿನ ಪ್ರಕಾರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿ ಮಾಡಲು ಸರ್ಕಾರ ನಿರ್ಧರಿಸಿದೆ. ಸಣ್ಣ ಹಾಗೂ ಅತಿಸಣ್ಣ ರೈತರು ನನ್ನ ಸರ್ಕಾರಕ್ಕೆ ಆದ್ಯತೆಯಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಇಂಥ ಸಣ್ಣ ರೈತರ ಖಾತೆಗಳಿಗೆ ಸರ್ಕಾರ 1.13 ಕೋಟಿ ರೂ ಹಣ ನೇರವಾಗಿ ವರ್ಗಾವಣೆ ಆಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ತಿಳಿಸಿದರು.
ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…