ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಮಾದರಿ ಒಳಗೊಂಡ, ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರ ಇಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಗಮನಸೆಳೆಯಿತು.
ಸ್ತಬ್ಧಚಿತ್ರದ ಬಹುಪಾಲು ಸ್ಥಳವನ್ನು ರಾಮಮಂದಿರದ ಮಾದರಿ ಆವರಿಸಿದ್ದರೆ, ಮುಂಭಾಗ ಮಹರ್ಷಿ ವಾಲ್ಮೀಕಿ ಕುಳಿತ ಭಂಗಿಯಲ್ಲಿರುವ ಎತ್ತರದ ಮೂರ್ತಿ ಇತ್ತು. ‘ಇದು, ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ ಬಿಂಬಿಸಲಿದೆ’ ಎಂದು ಉತ್ತರ ಪ್ರದೇಶದ ಅಧಿಕಾರಿಯೊಬ್ಬರು ತಿಳಿಸಿದರು. ಸಂತರ ವೇಷದಲ್ಲಿದ್ದ ಹಲವರು, ಕರಕುಶಲ ಕಲಾವಿದರು ಇದ್ದರು.
ಸ್ತಬ್ಧಚಿತ್ರದ ಒಂದು ಬದಿಯಲ್ಲಿ, ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದವು. ಉಳಿದಂತೆ, ಶ್ರೀರಾಮ, ಶಬರಿ, ಅಹಿಲ್ಯಾ, ಹನುಮಾನರ ಉಬ್ಬುಕಲಾಕೃತಿಗಳು ಇದ್ದವು. ಉತ್ತರ ಪ್ರದೇಶ, ಕರ್ನಾಟಕ ಸೇರಿ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.
ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ : ವಿನಯ್ ಗುರೂಜಿ -Vishwanews24
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…